BJPಗೆ ಹಿನ್ನೆಡೆ: ಕೇರಳದ ಹಲವು BJP ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ!
ಕೇರಳ ವಿಧಾನಸಭಾ ಚುನಾವಣೆಯು ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಕೂಟ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಅಧಿಕಾರಕ್ಕಾಗಿ ಸೆಣೆಸಾಡುತ್ತಿವೆ. ಈ ಮಧ್ಯೆ, ಬಿಜೆಪಿಗೆ ವಿವಿಧ ರೀತಿಯಲ್ಲಿ ಹಿನ್ನೆಡೆ ಉಂಟಾಗುತ್ತಿದೆ. ಎನ್ಡಿಎ ಮೈತ್ರಿಕೂಟದ ಹಲವಾರು ಅಭ್ಯರ್ಥಿಗಳ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ಗುರುವಾಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಹಿಳಾ ಮೊರ್ಚಾದ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಮಣಿಯಂ, ಥಲಸ್ಸೆರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮತ್ತು ಕಣ್ಣೂರಿನ ಎನ್ ಹರಿದಾಸ್ ಅವರ ನಾಮಪತ್ರಗಳು ತಿರಸ್ಕತಗೊಂಡಿವೆ. ಅಭ್ಯರ್ಥಿಗಳ ನಾಮಪತ್ರದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಹಿ ಇಲ್ಲ ಎಂಬ ಕಾರಣದಿಂದಾಗಿ ನಾಮಪತ್ರ ತಿರಸ್ಕಾರಗೊಂಡಿವೆ ಎಂದು ತಿಳಿದು ಬಂದಿದೆ.
ಅಲ್ಲದೆ, ಇಡುಕ್ಕಿಯ ದೇವಿಕುಲಂ ಕ್ಷೇತ್ರದಲ್ಲಿ ಎಐಎಡಿಎಂಕೆ ಅಭ್ಯರ್ಥಿ ಧನಲಕ್ಷ್ಮಿ ನಾಮಪತ್ರವು ಅಪೂರ್ಣವಾಗಿದೆ ಎಂದು ತಿರಸ್ಕರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆಯೋಗದ ಕ್ರಮವನ್ನು ಖಂಡಿಸಿ ಬಿಜೆಪಿ ಅಭ್ಯರ್ಥಿಗಳು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಭ್ಯರ್ಥಿಗಳ ಅರ್ಜಿಯನ್ನು ಪರಿಶೀಲಿಸಿರುವ ಕೋರ್ಟ್, ಆಯೋಗದ ಪ್ರತಿಕ್ರಿಯೆ ಕೇಳಿದ್ದು, ವಿವರಣೆ ನೀಡುವಂತೆ ಸೂಚಿಸಿದೆ.
ಕೇರಳದಲ್ಲಿ ಏಪ್ರಿಲ್ 06 ರಂದು ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಕೇರಳ ಅಸೆಂಬ್ಲಿ ಚುನಾವಣೆ; ಎಡರಂಗ ಮತ್ತು ಯುಡಿಎಫ್ ಮಧ್ಯೆ ಫೈಟ್; BJP ಕತೆಯೇನು ಗೊತ್ತೇ?