ರಮೇಶ್‌ ಜಾರಕಿಹೊಳಿ ಪ್ರಕರಣ: ಸಿಡಿ ಲೇಡಿ ‘ಅಲ್ಲೂ ಇಲ್ಲ – ಎಲ್ಲೂ ಇಲ್ಲಾ’; ಇಲ್ಲೇ ಇದ್ದಾಳೆ!

ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸಿಡಿ ಪ್ರಕರಣದ ಯುವತಿ ಎಲ್ಲಿದ್ದಾಳೆ ಎಂದು  ಕಳೆದ 25 ದಿನಗಳಿಂದ ಪೊಲೀಸರು ಹುಡುಕುತ್ತಿದ್ದಾರೆ. ಆಕೆ ಮಾತ್ರವಲ್ಲದೆ, ಪ್ರಕರಣದ ಕಿಂಗ್​ಪಿನ್‌ಗಳು ಎನ್ನಲಾದ​ ನರೇಶ್​ಗೌಡ ಹಾಗೂ ಹ್ಯಾಕರ್​ ಶ್ರವಣ್​ಗಾಗಿ ಎಸ್​ಐಟಿ ಪೊಲೀಸರು ಗೋವಾ, ರಾಜಸ್ಥಾನ, ಮಧ್ಯಪ್ರದೇಶ, ದೆಹಲಿ ಸೇರಿದಂತೆ ಹೊರ ರಾಜ್ಯಗಳಲ್ಲೂ ಹುಡುಕಾಟ ನಡೆಸಿದ್ದಾರೆ.

ಈ ವೇಳೆ ನರೇಶ್‌ಗೌಡ ಮತ್ತು ಹ್ಯಾಕರ್‌ ಉತ್ತರ ಭಾರತದಲ್ಲಿದ್ದಾರೆ ಎನ್ನಲಾಗುತ್ತಿದ್ದು, ಸಿಡಿ ಲೇಡಿ ಮಾತ್ರ ಕರ್ನಾಟಕದಲ್ಲೇ ಇದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ!

ಇಂದು ಸಿಕ್ಕ ಮಾಹಿತಿ ಪ್ರಕಾರ ಸಿಡಿ ಯುವತಿ ಬೆಂಗಳೂರು ಹೊರಹೊಲಯದಲ್ಲೇ ಇದ್ದಾಳೆ. ಉದ್ಯಮಿ ಶಿವಕುಮಾರ್​ ಅವರ ಕಾರು ಚಾಲಕ ಪರಶಿವಮೂರ್ತಿ ಎಂಬಾತ ಈಕೆಯ ಜತೆಯಲ್ಲಿದ್ದಾನೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು ಆಸುಪಾಸಿನಲ್ಲೇ ಇದ್ದುಕೊಂಡು ಯುವತಿ ಅಲ್ಲಿಂದಲೇ ವಿಡಿಯೋ ಮಾಡಿ ಕಳಿಸುತ್ತಿದ್ದಾಳೆ ಎನ್ನಲಾಗುತ್ತಿದೆ. ರೂಂ ಚೆಕ್​ಔಟ್​ ಮಾಡಲು ಕೆಲವೇ ಕ್ಷಣ ಇರುವಾಗ ವಿಡಿಯೋ ಮಾಡಿ ಮೊಬೈಲ್​ ಮೂಲಕ ಕಳಿಸಿ ಬಳಿಕ ಆಫ್​ ಮೊಬೈಲ್​ ಅನ್ನು ಆಫ್​ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಇಂದು ಎಸ್​ಐಟಿ ವಿಚಾರಣೆಯನ್ನು ಯುವತಿಯ ಪೋಷಕರು ಎದುರಿಸಿದ್ದಾರೆ. ನನ್ನ ಮಗಳು ಅಮಾಯಕಿ, ಆಕೆ ಅಪಾಯದಲ್ಲಿದ್ದಾಳೆ. ಮೊದಲು ಅವಳನ್ನು ರಕ್ಷಿಸಿ. ಅವಳು ಯಾರದ್ದೋ ಮಾತು ಕೇಳುತ್ತಿರಬಹುದು ಎಂದು ಎಸ್​ಐಟಿ ಪೊಲೀಸರ ಮುಂದೆ ಸಿಡಿ ಲೇಡಿಯ ತಾಯಿ ಕಣ್ಣೀರಿಟ್ಟಿದ್ದಾರೆ.

ಇದನ್ನೂ ಓದಿ: ‘ಅಂಥ ಸರ್ಕಾವನ್ನೇ ಬೀಳಿಸಿದ ನನಗೆ ಸಿಡಿ ಲೇಡಿ ದೂರು ಯಾವ ಲೆಕ್ಕ’ – ರಮೇಶ್ ಜಾರಕಿಹೊಳಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights