ಜಾರಕಿಹೊಳಿ ಪ್ರಕರಣ: ಅತ್ಯಾಚಾರ ಸಂತ್ರಸ್ತೆಯ ಪರ ವಕೀಲ ಜಗದೀಶ್‌ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದ ಅತ್ಯಾಚಾರ ಸಂತ್ರಸ್ತೆಯ ಪರ ವಕೀಲ ಜಗದೀಶ್‌ ವಿರುದ್ದವೇ ಎಸ್‌ಐಟಿ ಅಧಿಕಾರಿಗಳು ದೂರು ನೀಡಿದ್ದಾರೆ. ಇದು, ಈ ಹಿಂದೆ ‘ಎಸ್‌ಐಟಿ ಅಧಿಕಾರಿಗಳು ಸರ್ಕಾರದ ಪರವಾಗಿದ್ದಾರೆ’ ಎಂದು ಆರೋಪಿಸಿದ್ದ ಸಂತ್ರಸ್ತ ಯುವತಿ ಹೇಳಿಕೆಯನ್ನು ಸಾಬೀತು ಪಡಿಸುವಂತಿದೆ ಎಂದು ಹೇಳಲಾಗುತ್ತಿದೆ.

“ವಕೀಲ ಕೆ.ಎನ್‌. ಜಗದೀಶ್ ಕುಮಾರ್ ವಿನಾಕಾರಣ ಇಲ್ಲಸಲ್ಲದ ಹೇಳಿಕೆ ನೀಡಿ ತನಿಖೆಗೆ ತೊಂದರೆ ಉಂಟು ಮಾಡುತ್ತಿದ್ದಾರೆ” ಎಂದು ಆರೋಪಿಸಿ ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು, ತಂಡದ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ ಎಂದು ಮಾಧ್ಯವಮಗಳು ವರದಿ ಮಾಡಿವೆ.

ಆದರೆ ಎಸ್‌ಐಟಿ ಅಧಿಕಾರಿಗಳ ಬಗ್ಗೆಯೇ ಹಲವು ಆರೋಪ ಮಾಡುತ್ತಿರುವ ಜಗದೀಶ್, ಮಾಧ್ಯಮಗಳ ಎದುರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದಾರೆ. ಇದರಿಂದ ಮುಜುಗರಕ್ಕೀಡಾಗುತ್ತಿರುವ ಅಧಿಕಾರಿಗಳು, ಜಗದೀಶ್‌ ಅವರಿಂದ ಆಗುತ್ತಿರುವ ತೊಂದರೆ ಬಗ್ಗೆ ತಂಡದ ಮುಖ್ಯಸ್ಥ ಸೌಮೇಂದು ಮುಖರ್ಜಿ ಬಳಿ ಹೇಳಿಕೊಂಡಿದ್ದಾರೆ.

“ತನಿಖಾ ಸ್ಥಳ, ವಿಚಾರಣಾ ಕೊಠಡಿ ಬಳಿ ಜಗದೀಶ್‌ ಬರುತ್ತಿದ್ದಾರೆ. ಮಾಧ್ಯಮಗಳ ಎದುರು ಎಸ್‌ಐಟಿ ವಿರುದ್ಧವೇ ಮಾತನಾಡುತ್ತಿದ್ದಾರೆ. ಇದು ತನಿಖೆಗೆ ಅಡಚಣೆಯನ್ನುಂಟು ಮಾಡುತ್ತಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳು ಕೋರಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜಗದೀಶ್‌ಕುಮಾರ್, “ಸಂತ್ರಸ್ತೆ ಮನವಿ ಮಾಡಿದ್ದರಿಂದ ಅವರ ಪರ ಕಾನೂನು ಪ್ರಕಾರ ಹೋರಾಡುತ್ತಾ ಮಾಧ್ಯಮಗಳ ಎದುರು ಮಾತನಾಡುತ್ತಿದ್ದೇನೆ. ನನ್ನಿಂದ ತನಿಖೆಗೆ ತೊಂದರೆಯಾಗುತ್ತಿದ್ದರೆ, ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಲಿ” ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಅತ್ಯಾಚಾರ ಸಂತ್ರಸ್ಥೆಯ ಪರ ವಕೀಲ ಜಗದೀಶ್‌ ಯಾರು ಗೊತ್ತೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights