ರೈತ ಹೋರಾಟಕ್ಕೆ ಬೆಂಬಲ: ಉತ್ತರ ಪ್ರದೇಶದ ಬಿಜೆಪಿ ನಾಯಕಿ ರಾಜೀನಾಮೆ!

ರೈತರ ಆಂದೋಲನವನ್ನು ಬೆಂಬಲಿಸಿ ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕಿ ಪ್ರಿಯಮ್‌ವಾಡ ತೋಮರ್ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಅಲ್ಲದೆ, ಅವರು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ ಸ್ಥಾನಕ್ಕೂ ಕೂಡ ರಾಜೀನಾಮೆ ನೀಡಿದ್ದಾರೆ.

ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಚುನಾವಣೆಗೂ ಮುನ್ನವೇ ಅವರು ತಮ್ಮ ಸ್ಥಾನಕ್ಕೆ ಹಾಗೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಅವರು, ಕೃಷಿ ಕಾಯ್ದೆಗಳ ವಿರುದ್ದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು ಹೊಸ ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯ “ರೈತ ವಿರೋಧಿ” ನೀತಿಯಿಂದಾಗಿ ತಾವು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತೋಮರ್ ಹೇಳಿದ್ದಾರೆ.

“ಬಿಜೆಪಿ ಉತ್ತರ ಪ್ರದೇಶದ ಮಹಿಳೆಯರನ್ನು ನಿರ್ಲಕ್ಷಿಸಿದೆ. ಮಹಿಳೆಯರ ಆಶಯಗಳನ್ನು ಪೂರೈಸುವಲ್ಲಿ ವಿಫಲವಾಗಿದೆ” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ವಿಡಿಯೋ: ಕ್ಯಾಮೆರಾ-ರೂಲ್‌-ಆಕ್ಷನ್‌; ಕಾಡಿನ ಬೆಂಕಿ ನಂದಿಸಲು ಅರಣ್ಯ ಸಚಿವರ ಅಸಾಮಾನ್ಯ ಪ್ರಯತ್ನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights