ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರನ ಆತ್ಮಹತ್ಯೆ…!

ಸಾರಿಗೆ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ನಡೆದಿದೆ.

ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡ ನೌಕರ. ಸಾರಿಗೆ ಮುಷ್ಕರದಿಂದಾಗಿ ನೌಕರ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಆದರೆ ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸಾರಿಗೆ ನೌಕರರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ  ಮುಷ್ಕರ ಪ್ರಾರಂಭವಾಗಿ ಇಂದಿಗೆ ಮೂರನೇ ದಿನ.  ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿದ್ದ ಶಿವಕುಮಾರ್ ಮುಷ್ಕರದಿಂದಾಗಿ ಕೆಲಸಕ್ಕೆ ಹಾಜರಾಗಿರಲಿಲ್ಲ. ಸಾರಿಗೆ ಅಧಿಕಾರಿಗಳು ಕೆಲಸಕ್ಕೆ ಹಾಜರಾಗುವಂತೆ ಒತ್ತಡ ಹೇರಿದ್ದರಿಂದ ಶಿವಕುಮಾರ್ ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣುಬಿಗಿದುಕೊಮಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ವಾಕರಾರಸಾ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದರು.

ಸದ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಇಂದು ಸಿದ್ದರಾಮಯ್ಯ ಅವರು ಸವದತ್ತಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪ್ರಕರಣ ಸಂಬಂಧ ಮುಷ್ಕರ ನಿರತ ಸಾರಿಗೆ ನೌಕರರು ಇಂದು ಮಾಜಿ ಸಿದ್ದರಾಮಯ್ಯರನ್ನು ಭೇಟಿ ಮಾಡಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights