ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು!

ಸಿಎಂ ಬಿಎಸ್ ಯಡಿಯೂರಪ್ಪ ಅವರು ಸುಸ್ತು ಮತ್ತು ಜ್ವರದಿಂದಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದಾಗ ಕೊರೊನಾ ಪಾಸಿಟಿವ್ ಬಂದಿರುವುದು ದೃಢವಾಗಿದೆ.

ನಿನ್ನೆಯಿಂದಲೂ ಜ್ವರ ಹಾಗೂ ಸುಸ್ತು ಸಿಎಂ ಅವರಲ್ಲಿ ಕಾಣಿಸಿಕೊಂಡಿತ್ತು. ಹೀಗಾಗಿ ಅವರ ಬೆಳಗಾವಿಯಲ್ಲೇ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಇಂದು ಅದೇ ಅನಾರೋಗ್ಯದಿಂದ ತುರ್ತು ಸಭೆ ಮಾಡಿದ್ದರು. ಬಳಿಕ ಮಾಧ್ಯಮದ ಮುಂದೆ ಮಾತನಾಡಿದ ಬಿಎಸ್ ಯಡಿಯೂರಪ್ಪನವರಿಗೆ ಮತ್ತೆ ಅದೇ ಸುಸ್ತು ಜ್ವರ ಕಾಣಿಸಿಕೊಂಡಿದೆ. ನಂತರ ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದಾಗ ಕೊರೊನಾ ಇರುವುದು ದೃಢವಾಗಿದೆ.ವೈದ್ಯರ ಸಲಹೆ ಮೇರೆಗೆ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯಡಿಯೂರಪ್ಪ ಅವರಿಗೆ ಇದೇ ಮೊದಲ ಬಾರಿಗೆ ಕೊರೊನಾ ಸೋಂಕು ತಾಗಿಲ್ಲ. ಈ ಮೊದಲು ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಸಂಪೂರ್ಣವಾಗಿ ಗುಣಮುಖರಾಗಿದ್ದರು. ಅದಾದ ಬಳಿ ಸದ್ಯ ಮತ್ತೆ ಎರಡನೇ ಬಾರಿ ಕೊರೊನಾ ಸೋಂಕು ತಗುಲಿದೆ. ಯಡಿಯೂರಪ್ಪ ಸ್ವತ: ಈ ಬಗ್ಗೆ ಟ್ವಿಟ್ ಮಾಡಿದ್ದಾರೆ. ತಮ್ಮ ಸಂಪರ್ಕದಲ್ಲಿದ್ದವರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಮನವಿ ಮಾಡಿಕೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights