ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ : 20 ರೋಗಿಗಳು ಸಾವು!

ಗಂಗಾ ರಾಮ್ ಆಸ್ಪತ್ರೆಯ ನಂತರ ಆಮ್ಲಜನಕದ ಕೊರತೆಯಿಂದ ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆ.

ಆಮ್ಲಜನಕದ ಕೊರತೆಯಿಂದಾಗಿ ಕಳೆದ 24 ಗಂಟೆಗಳಲ್ಲಿ 25 ರೋಗಿಗಳು ಸಾವನ್ನಪ್ಪಿ ಇತರ 60 ರೋಗಿಗಳು ಅಪಾಯದಲ್ಲಿದ್ದಾರೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯು ಶುಕ್ರವಾರ ವರದಿ ಮಾಡಿದ ನಂತರ ರಾಷ್ಟ್ರೀಯ ರಾಜಧಾನಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಕೋವಿಡ್-19 ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಹಲವಾರು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ ಸರಬರಾಜು ಕ್ಷೀಣಿಸುತ್ತಿದೆ. ಹೀಗಾಗಿ ಆಮ್ಲಜನಕದ ಕೊರತೆಯಿಂದಾಗಿ ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

“ಆಮ್ಲಜನಕ ಪೂರೈಕೆ ಈಗ ಕೇವಲ ಅರ್ಧ ಘಂಟೆಯವರೆಗೆ ಇರುತ್ತದೆ, ಇದರಿಂದ 200 ಕ್ಕೂ ಹೆಚ್ಚು ಜೀವಗಳು ಅಪಾಯದಲ್ಲಿದೆ. ಕಳೆದ ರಾತ್ರಿ ಆಮ್ಲಜನಕದ ಕೊರತೆಯಿಂದಾಗಿ ನಾವು 20 ಜನರನ್ನು ಕಳೆದುಕೊಂಡಿದ್ದೇವೆ” ಎಂದು ಜೈಪುರ ಗೋಲ್ಡನ್ ಆಸ್ಪತ್ರೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭಾರತ 3,46,786 ಹೊಸ ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್-19 ಒಟ್ಟು ಪ್ರಕರಣಗಳ ಸಂಖ್ಯೆ 1,66,10,481 ಕ್ಕೆ ಏರಿಕೆಯಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights