ರಾಜ್ಯದಲ್ಲಿ ಕೈಮೀರಿದ ಕೊರೊನಾ : ಒಂದೇ ದಿನ 29,438 ಜನರಿಗೆ ಸೋಂಕು : 208 ಜನ ಬಲಿ!
ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು ಮಹಾಮಾರಿ ಕೊರೊನಾಕ್ಕೆ 208 ಜನ ಬಲಿಯಾಗಿದ್ದು ಕಳೆದ 24 ಗಂಟೆಯಲ್ಲಿ 29,438 ಜನರಿಗೆ ಸೋಂಕು ತಗುಲಿದೆ.
ಹೌದು.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರದಿ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿದ 208 ಸೋಂಕಿತರ ಪೈಕಿ 149 ಸಾವು ಬೆಂಗಳೂರಿನಲ್ಲಿ ಸಂಭವಿಸಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 14283ಕ್ಕೆ ಏರಿಕೆಯಾಗಿದೆ.
ಶುಕ್ರವಾರ ದಾಖಲಾದ 29,438 ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 13,04,397ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದಾಖಲಾದ 29,438 ಪ್ರಕರಣಗಳ ಪೈಕಿ ಬೆಂಗಳೂರಿನಲ್ಲೇ 17,342 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6.32,923ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ರಾಜ್ಯದಲ್ಲಿ 9058 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,55,612ಕ್ಕೆ ಏರಿಕೆಯಾಗಿದೆ. ಇನ್ನು 2,34483 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 1280 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.