ರಾಜ್ಯದಲ್ಲಿ ಕೊರೊನಾ ಅಟ್ಟಹಾಸ : ಒಂದೇ ದಿನ 34,804 ಕೇಸ್ – 143 ಜನ ಬಲಿ!

ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಹಿಂದೆಂದು ಕಾಣದಷ್ಟು ಏಕದಿನ ಪ್ರಕರಣಗಳು ದಾಖಲಾಗಿವೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 34,804 ಪ್ರಕರಣಗಳು ದಾಖಲಾಗಿದ್ದು 143 ಜನ ಸೋಂಕಿಗೆ ಬಲಿಯಾಗಿದ್ದಾರೆ.

ಇಷ್ಟು ದಿನ ಬೆಂಗಳೂರಿನಲ್ಲಿ ಅಧಿಕ ಜನರಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಹಾಮಾರಿ ಕೊರೊನಾ ಸದ್ಯ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದೆ.

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕೈಮೀರಿ ಹೋಗುತ್ತಿದೆ. ಇಂದು 20,733 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಾತ್ರವಲ್ಲದೇ ಬರೋಬ್ಬರಿ 77 ಜನ ಸಾವನ್ನಪ್ಪಿದ್ದಾರೆ. ಸದ್ಯ ರಾಜಧಾನಿಯಲ್ಲಿ 1,80,542 ಸಕ್ರಿಯ ಪ್ರಕರಣಗಳಿದ್ದು, ಬೆಡ್ ಮತ್ತು ಆಕ್ಸಿಜನ್ ಕೊರತೆಯಿಂದ ಜನ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದಲ್ಲಿ ಸದ್ಯ 2,62,162 ಸಕ್ರಿಯ ಪ್ರಕರಣಗಳಿದ್ದು, 1492 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ. ಇಂದು 6,982 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿತರ ಖಚಿತ ಪ್ರಮಾಣ ಶೇ.19.70 ಮತ್ತು ಮರಣ ಪ್ರಮಾಣ ಶೇ.0.41ಕ್ಕೆ ಏರಿಕೆಯಾಗಿದೆ. ಈ ವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 14,426ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ 564, ದಾವಣಗೆರೆ 242, ಧಾರವಾಡ 546, ಗದಗ 76, ಹಾಸನ 768, ಹಾವೇರಿ 99, ಕಲಬುರಗಿ 626, ಕೊಡಗು 1,077, ಕೋಲಾರ 782, ಕೊಪ್ಪಳ 152, ಮಂಡ್ಯ 814, ಮೈಸೂರು 700, ರಾಯಚೂರು 643, ರಾಮನಗರ 225, ಶಿವಮೊಗ್ಗ 418, ತುಮಕೂರು 1,153, ಉಡುಪಿ 319, ಉತ್ತರ ಕನ್ನಡ 243, ವಿಜಯಪುರ 468 ,ಬಾಗಲಕೋಟೆ 390, ಬಳ್ಳಾರಿ 732, ಬೆಳಗಾವಿ- 336, ಬೆಂಗಳೂರು ಗ್ರಾಮಾಂತರ 864, ಬೆಂಗಳೂರು ನಗರ 20,733, ಬೀದರ್ 406, ಚಾಮರಾಜನಗರ 284, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 247, ಚಿತ್ರದುರ್ಗ 100 ಮತ್ತು ಯಾದಗಿರಿಯಲ್ಲಿ 363 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights