ನಾಳೆಯಿಂದ ಸಿಎಂ ಮನೆ ಮುಂದೆ ಧರಣಿ ಕೂರುತ್ತೇನೆ: ಹೆಚ್‌ಡಿ ರೇವಣ್ಣ

ಸಮರ್ಪಕವಾಗಿ ಕೊರೊನಾ ಲಸಿಕೆ ನೀಡದೆ ರಾಜ್ಯ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದೆ. ಹೀಗಾಗಿ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುತ್ತೇನೆ. ನಾಳೆಯಿಂದ ಸಿಎಂ ಯಡಿಯೂರಪ್ಪ ಮನೆ ಮುಂದೆ ಧರಣಿ ಕೂರುತ್ತೇನೆ ಎಂದು ಮಾಜಿ ಸಚಿವ ಹೆಚ್‌ಡಿ ರೇವಣ್ಣ ಹೇಳಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಸಿಗದೇ ಜನರು ಪರದಾಡುತ್ತಿದ್ದಾರೆ. ಲಸಿಕೆಯನ್ನು ಒದಗಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಜಿಲ್ಲೆಯಲ್ಲಿನ ಸೋಂಕಿತರ ಸಾವನ್ನು ಕೂಡ ಅಧಿಕಾರಿಗಳು ಮುಚ್ಚಿಡುತ್ತಿದ್ದಾರೆ ಎಂದು ರೇವಣ್ಣ ಆರೋಪಿಸಿದ್ದಾರೆ.

ಜಿಲ್ಲೆಗೆ ರೆಮ್ ಡಿಸಿವಿರ್ ಪೂರೈಕೆ ಮಾಡಬೇಕು. ನಾನು, ದೇವೇಗೌಡರು ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಆರೋಗ್ಯ ಸಚಿವರಿಗೆ ಕರೆ ಮಾಡಿದರೆ ಫೋನ್ ರಿಸೀವ್ ಮಾಡುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಶ್ರೀಮಂತರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಬಡವರನ್ನು ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights