KKR ತಂಡದ ಇಬ್ಬರು ಕ್ರಿಕೆಟಿಗರಿಗೆ ಕೊರೊನಾ; ಇಂದಿನ RCB ವಿರುದ್ದ ಐಪಿಎಲ್‌ ಮ್ಯಾಚ್‌ ಮುಂದೂಡಿಕೆ!

ಕೋಲ್ಕತಾ ನೈಟ್ ರೈಡರ್ಸ್ ತಂಡದ ವರುಣ್​ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್​ಗೆ ಕೊವಿಡ್ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮೇ 03) ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತಾ ನೈಟ್ ರೈಡರ್ಸ್ (KKR) ನಡುವಿನ ಐಪಿಎಲ್ ಪಂದ್ಯವನ್ನು ಮುಂದೂಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಆರ್‌ಸಿಬಿ ಮತ್ತು ಕೆಕೆಆರ್‌ ನಡುವೆ ಐಪಿಎಲ್‌ 2021ನೇ ಸರಣಿಯ 30ನೇ ಪಂದ್ಯ ನಡೆಯಬೇಕಿತ್ತು. ಆದರೆ, ಕೆಕೆಆರ್‌ ತಂಡದ ಇಬ್ಬರು ಕ್ರಿಕೆಟಿಗರಿಗೆ ಕೊರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮುಂದೂಡಲಾಗಿದೆ.

ಕೆಕೆಆರ್ ಆಡಿದ್ದ ಹಿಂದಿನ ಮ್ಯಾಚ್‌ನಲ್ಲಿ ಇಬ್ಬರಿಗೂ ಗಾಯಗಳಾಗಿದ್ದವು. ಅದಕ್ಕಾಗಿ ಚಿಕಿತ್ಸೆ ಪಡೆಯಲು, ಸ್ಕ್ಯಾನಿಂಗ್ ಮಾಡಿಸಲು ಹೊರಗೆ ಹೋಗಿದ್ದಾಗ ಇವರಿಬ್ಬರಿಗೂ ಸೋಂಕು ಬಂದಿರಬಹುದು ಎಂದು ಹೇಳಲಾಗಿದೆ.

ಸದ್ಯ, ಏಳು ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು 10 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಎರಡು ಪಂದ್ಯಗಳಲ್ಲಿ ಜಯಗಳಿಸಿರುವ ಕೊಲ್ಕತ್ತಾ ನೈಟ್ ರೈರ್ಡಸ್​​ ತಂಡವು 7ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಅದ್ಭುತ ಕ್ಯಾಚ್‌ ಹಿಡಿದ ಪಂಜಾಬ್ ತಂಡದ ರವಿ ಬಿಷ್ಣೋಯ್; ಆದರೂ ತಂಡದ ಸೋಲಿಗೆ ಅವರೇ ಕಾರಣ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights