ಕೊರೊನಾ ಲಸಿಕೆಗೂ ಮುನ್ನ ರಕ್ತದಾನ ಮಾಡಿದ ನಟ ವಸಿಷ್ಠ ಸಿಂಹ..!
ಕೊರೊನಾ ರಾಜ್ಯಾದ್ಯಂತ ಅಟ್ಟಹಾಸ ಮೆರೆಯುತ್ತಿದ್ದು ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಮುನ್ನ ಆರೋಗ್ಯವಂತರು ರಕ್ತದಾನ ಮಾಡಬೇಕು ಎಂದು ಬಹು ದಿನಗಳಿಂದ ಪ್ರಜ್ಞಾವಂತರು ಹೇಳುತ್ತಿದ್ದಾರೆ. ನಟ ವಸಿಷ್ಠ ಸಿಂಹ ಈ ಮಾತನ್ನು ನಿಜ ಮಾಡಿದ್ದಾರೆ. ಕೊರೊನಾ ವ್ಯಾಕ್ಸಿನ್ ಪಡೆಯುವ ಮುನ್ನ ರಕ್ತದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ.
ಕೊರೊನಾ ಲಸಿಕೆ ಪಡೆದು ತಿಂಗಳ ಕಾಲ ರಕ್ತದಾನ ಮಾಡುವಂತಿಲ್ಲ. ೀ ಕಾರಣ ಕೊರೊನಾ ರೋಗಿಗಳಿಗೆ ರಕ್ತಸ ಅಭಾವ ಸೃಷ್ಟಿಯಾಗುವ ಾತಂಕ ವ್ಯಕ್ತವಾಗುತ್ತಿದೆ. ಹೀಗಾಗಿ ಆರೋಗ್ಯವಂತರು ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ನಟ ವಸಿಷ್ಠ ಸಿಂಹ ಹಾಗೂ ಕೆಪಿಟಿಸಿಎಲ್ ನೌಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಟಿ ಆರ್ ರಾಮು ಕೃಷ್ಯಯ್ಯ ರಕ್ತದಾನ ಶಿಬಿರ ಆಯೋಜಿಸಿದ್ದರು.
ಮೇ 9 ರಂದು ನಡೆದ ರಕ್ತದಾನ ಶಿಬಿರದಲ್ಲಿ ಅನೇಕರು ಭಾಗಿಯಾಗಿದ್ದರು. 18 ವರ್ಷದ ಮೇಲ್ಪಟ್ಟವರು ರಕ್ತದಾನ ಮಾಡುವಂತೆ ವಸಿಷ್ಠ ಜಾಗೃತಿ ಮೂಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಿರುತೆರೆ ನಟಿ ಯಮುನಾ ಶ್ರೀನಿಧಿ ತಮ್ಮ ಹುಟ್ಟುಹಬ್ಬದ ದಿನ ರಕ್ತದಾನ ಮಾಡಿದ್ದರು. ಈ ಸಮಯದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿರವ ವೈದ್ಯರ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದರು.