ಚಾಮರಾಜನಗರ ದುರಂತ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್‌ ಚಿಟ್‌!

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದೊರೆಯದೇ 25 ಸೋಂಕಿತರು ಸಾವನ್ನಪ್ಪಿದ್ದ ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಸರಿಯಾದ ಸಮಯಕ್ಕೆ ಆಕ್ಸಿಜನ್‌ ಒದಗಿಸದೇ ವಿಳಂಬ ಧೋರಣೆ ತೋರಿಸಿದ್ದು, 25 ಸೋಂಕಿತರ ದುರಂತ ಸಾವಿಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರೇ ಕಾರಣ ಎಂದು ಆರೋಪಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ತನಿಖಾ ಆಯೋಗದ ವರದಿಯಲ್ಲಿ ಮೈಸೂರು ಜಿಲ್ಲಾಧಿಕಾರಿ ಆಕ್ಸಿಜನ್ ಪೂರೈಕೆ ತಡೆ ಹಿಡಿದ ಬಗ್ಗೆ ದಾಖಲೆಗಳಿಲ್ಲ ಎಂದು ತಿಳಿಸಿದೆ.

ಚಾಮರಾಜನಗರ ದುರಂತಕ್ಕೆ ಚಾಮರಾಜನಗರ ಜಿಲ್ಲಾಧಿಕಾರಿ ರವಿ ಅವರ ಕ್ರಿಯಾಶೀಲತೆಯ ಕೊರತೆಯೇ ಕಾರಣ ಎಂದು ತನಿಖಾ ತಂಡದ ವರದಿಯಲ್ಲಿ ತಿಳಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿ ಆಕ್ಸಿಜನ್ ಪೂರೈಕೆಯನ್ನು ತಡೆ ಹಿಡಿದಿಲ್ಲ. ಆಕ್ಸಿಜನ್ ಕೊರತೆ ಗಮನದಲ್ಲಿದ್ದರೂ ಸೂಕ್ತವಾಗಿ ಸ್ಪಂದಿಸದ ಚಾಮರಾಜನಗರ ಡಿಜಿ ರವಿ ಕಾರಣ ಎಂದು ಹೇಳಿದೆ.

ಮೇ 2ರಿಂದ ಮೇ 3ರ ಬೆಳಿಗ್ಗೆ 3 ಗಂಟೆಯವರೆಗೆ ಆಕ್ಸಿಜನನ್ ಇರಲಿಲ್ಲ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದಕ್ಕೆ ಸೂಕ್ತವಾಗಿ ಕ್ರಮ ಕೈಗೊಳ್ಳದ ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾಸ್ಪತ್ರೆಯೇ ಕಾರಣ ಎಂದು ತನಿಖಾ ವರದಿ ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆ 2021ರ ಸಿಇಟಿ ಪರೀಕ್ಷೆ ಮುಂದೂಡಿಕೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights