24 ಗಂಟೆಗಳಲ್ಲಿ ತೀವ್ರಗೊಳ್ಳಲಿರುವ ಟೌಕ್ಟೇ ಚಂಡಮಾರುತ : 5 ರಾಜ್ಯಗಳಲ್ಲಿ ಆತಂಕ!
24 ಗಂಟೆಗಳಲ್ಲಿ ಟೌಕ್ಟೇ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದ್ದು 5 ರಾಜ್ಯಗಳಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಐದು ರಾಜ್ಯಗಳಲ್ಲಿ ಎನ್ಡಿಆರ್ಎಫ್ (ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ) ಯ 50 ಕ್ಕೂ ಹೆಚ್ಚು ತಂಡಗಳು ಕರ್ತವ್ಯದಲ್ಲಿವೆ.
ಸೈಕ್ಲೋನಿಕ್ ಚಂಡಮಾರುತ 24 ಗಂಟೆಯೊಳಗೆ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಮಂಗಳವಾರ ಬೆಳಿಗ್ಗೆ ಗುಜರಾತ್ ಕರಾವಳಿಯಲ್ಲಿ ಅಪ್ಪಳಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಗುಜರಾತ್ ಮತ್ತು ಡಿಯು ಕರಾವಳಿಗಳಲ್ಲಿ ಚಂಡಮಾರುತದ ಅಪ್ಪಳಿಸುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಕೇರಳ, ಕರ್ನಾಟಕ ಮತ್ತು ಗೋವಾಗಳಲ್ಲಿ ಭಾನುವಾರದವರೆಗೆ ಮತ್ತು ಗುಜರಾತ್ನ ಸೌರಾಷ್ಟ್ರ, ಕಚ್ನಲ್ಲಿ ಮಂಗಳವಾರ ಮತ್ತು ಬುಧವಾರದಂದು ಭಾರಿ ಪ್ರವಾಹ ಮತ್ತು ಭೂಕುಸಿತ ಉಂಟಾಗುತ್ತದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
ಶುಕ್ರವಾರ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಕೇರಳದ ಕೊಚ್ಚಿಯಲ್ಲಿ ನಿವಾಸಿಗಳಿಗೆ ಸಹಾಯ ಮಾಡುವ ದೃಶ್ಯಗಳು ಕಂಡುಬಂದಿದ್ದು, ಲಕ್ಷದ್ವೀಪ ದ್ವೀಪಗಳ ತಗ್ಗು ಪ್ರದೇಶಗಳು ಪ್ರವಾಹಕ್ಕೆ ಸಿಲುಕುವ ಸಾಧ್ಯತೆ ಇದೆ. ಹೀಗಾಗಿ ಕೆಲವೆಡೆ ರೆಡ್ ಅಲರ್ಟ್ ಘೋಷಿಸಿಲಾಗಿದೆ.
ಮಂಗಳವಾರ ತನಕ ಅರೇಬಿಯನ್ ಸಮುದ್ರಕ್ಕೆ ಹೋಗುವುದನ್ನು ತಪ್ಪಿಸಲು ಮೀನುಗಾರರಿಗೆ ಸೂಚಿಸಲಾಗಿದೆ, ಪ್ರವಾಸೋದ್ಯಮ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಜೊತೆಗೆ ಸಮುದ್ರದ ನಿರೀಕ್ಷೆಯಲ್ಲಿ ನೌಕಾ ಕಾರ್ಯಾಚರಣೆಗೆ ಅಗತ್ಯ ಮುನ್ನೆಚ್ಚರಿಕೆಗಳನ್ನು ನೀಡಲಾಗಿದೆ.
ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.