ಪತ್ರಕರ್ತನ ವಿರುದ್ಧ ದೇಶದ್ರೋಹ ಪ್ರಕರಣ: ಎಫ್ಐಆರ್ ರದ್ದುಗೊಳಿಸಿ ಸುಪ್ರೀಂ ಆದೇಶ!
ಯೂಟ್ಯೂಬ್ ಶೋ ಕಾರ್ಯಕ್ರವೊಂದಲ್ಲಿ ಮೋದಿ ವಿರುದ್ದ ಕೆಲವು ಆರೋಪಗಳನ್ನು ಮಾಡಿದ್ದ ಕಾರಣಕ್ಕಾಗಿ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಮತ್ತು ಇತರ ಅಪರಾಧ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಪಡಿಸಿದೆ.
ಪತ್ರಕರ್ತ ವಿನೋದ್ ದುವಾ ಅವರು 2020 ಮೇ ತಿಂಗಳಿನಲ್ಲಿ ತಮ್ಮ ಯೂಟ್ಯೂನ್ ಚಾನೆಲ್ನಲ್ಲಿ ಪ್ರಧಾನಿ ಮೋದಿ ವಿರುದ್ದ ಕೆಲವು ಆರೋಪಗಳನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಸ್ಥಳೀಯ ಮುಖಂಡ ಶ್ಯಾಮ್ ಅವರು ಕಳೆದ ವರ್ಷ ಮೇ 6 ರಂದು ಕುಮಾರ್ಸೇನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅವರ ದೂರಿನ ಆಧಾರದ ಮೇಲೆ ವಿನೋದ್ ದುವಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಕಳೆದ ವರ್ಷ ಜುಲೈನಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್, ದುವಾ ವಿರುದ್ದ ಬಲವಂತವಾಗಿ ಯಾವುದೇ ಕ್ರಮಗಳನ್ನು ಜರುಗಿಸದಂತೆ ರಕ್ಷಣೆ ನೀಡಿತ್ತು.
ಇದೀಗ ಪ್ರಕರಣದ ವಿಚಾರಣೆ ನಡೆಸಿದರುವ ಕೋರ್ಟ್, ದುವಾ ವಿರುದ್ದ ದಾಖಲಾಗಿದ್ದ ದೇಶದ್ರೋಹ ಮತ್ತು ಇತರ ಪ್ರಕರಣಗಳನ್ನು ರದ್ದು ಪಡಿಸಿದೆ.
ಅಲ್ಲದೆ, ದುವಾ ಅವರು ಸಲ್ಲಿಸಿದ್ದ, ಸಮಿತಿಯಿಂದ ತೆರವುಗೊಳಿಸದ ಹೊರತು 10 ವರ್ಷಗಳ ಅನುಭವ ಹೊಂದಿರುವ ಯಾವುದೇ ಮಾಧ್ಯಮ ಸಿಬ್ಬಂದಿಗಳ ವಿರುದ್ಧ ಯಾವುದೇ ಎಫ್ಐಆರ್ ದಾಖಲಿಸುವಂತಿಲ್ಲ ಎಂದು ಸಲ್ಲಿಸಿದ್ದ ಮನವಿಯನ್ನೂ ಕೂಡ ರದ್ದುಗೊಳಿಸಿದೆ.
ಇದನ್ನೂ ಓದಿ: ಪುಲ್ವಾಮದಲ್ಲಿ ಗುಂಡಿನ ದಾಳಿ; ಬಿಜೆಪಿ ಕೌನ್ಸಲರ್ ಸಾವು!