ಜನರಿಗೆ ಒಳ್ಳೆಯದಾಗುವುದಾದರೆ ರಾಜೀನಾಮೆ ನೀಡುತ್ತೇನೆ: ಸಚಿವ ಸೋಮಶೇಖರ್

ಮೈಸೂರಿನ ಜನರಿಗೆ ಒಳ್ಳೆಯದಾಗುವುದಾದರೆ, ಮೈಸೂರಿನಲ್ಲಿ ಕೊರೊನಾ ಕಡಿಮೆಯಾಗುವುದಾದರೆ ನಾನು ರಾಜೀನಾಮೆ ನೀಡಲು ಸಿದ್ದನಿದ್ದೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

‘ಜನರ ದೃಷ್ಟಿಯಲ್ಲಿ ಕೊರೊನಾ ನಿರ್ವಹಣೆ ಹಾಗೂ ಮೈಸೂರಿನ ಅಭಿವೃದ್ಧಿಯ ವಿಚಾರದಲ್ಲಿ ನನ್ನ ಆಡಳಿತದಲ್ಲಿ ವೈಫಲ್ಯವೇನಾದರೂ ಇದ್ದರೆ ತಿದ್ದಿಕೊಳ್ಳಲು ನಾನು ಸಿದ್ದನಾಗಿದ್ದೇನೆ. ನಾನು ರಾಜೀನಾಮೆ ನೀಡುವುದರಿಂದ ಮೈಸೂರು ಜನರಿಗೆ ಒಳ್ಳೆಯದಾಗುವುದಾದರೆ ಅದಕ್ಕೂ ಸಿದ್ದನಿದ್ದೇನೆ’ ಎಂದು ಅವರು ಹೇಳಿದ್ದಾರೆ.

ನಾನು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಒತ್ತಾಯಿಸುತ್ತಿದ್ದಾರೆ. ನನ್ನ ವಿರುದ್ಧ ಮಾತನಾಡುವುದರಿಂದ ಅವರ ಪಟ್ಟ ಗಟ್ಟಿಯಾಗುವುದಿದ್ದರೆ ಅಥವಾ ಪದನ್ನೋತಿ ಲಭಿಸುವುದಾದರೆ ಒಳ್ಳೆಯದಾಗಲಿ’ ಎಂದು ಅವರ ಹೇಳಿದ್ದಾರೆ.

ಐಎಎಸ್‌ ಅಧಿಕಾರಿಗಳ ಸಂಘರ್ಷ ಪ್ರಕರಣದಿಂದ ಮನಸ್ಸಿಗೆ ತುಂಬಾ ನೋವುಂಟಾಗಿದೆ. ಸಂಘರ್ಷವು ಸೀರಿಯಲ್‌ ಸ್ಟೋರಿ ಅಲ್ಲ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯು ಮುಖ್ಯಮಂತ್ರಿಗೆ ವರದಿ ನೀಡುತ್ತಾರೆ. ಅದರ ಆಧಾರದ ಮೇಲೆ ಸೀರಿಯಲ್‌ ಕೊನೆಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:  5ಜಿ ನೆಟ್‌ವರ್ಕ್‌ ಬೇಡ ಎಂದು ಕೋರ್ಟ್‌ ಮೆಟ್ಟಿಲೇರಿದ್ದ ನಟಿ ಜೂಹಿ ಚಾವ್ಲಾಗೆ 20 ಲಕ್ಷ ದಂಡ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights