ಲಾಕ್‌ಡೌನ್‌ನಿಂದ ಸಿಗಲಿದೆ ರಿಲೀಫ್‌?; ಮೂರು ಹಂತಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆಗೆ ಸಿದ್ಧತೆ?

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊರಡಿಸುತ್ತಿರುವ ದಿನನಿತ್ಯದ ಪ್ರಕರಣಗಳ ಅಂಕಿಅಂಶಗಳಲ್ಲಿ ಇಳಿಕೆ ಕಂಡುಬರುತ್ತಿದೆ. ಹೀಗಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆಗಳನ್ನು ಆರಂಭಿಸಲು ಸಿದ್ದತೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.

ಕೊರೊನಾ ಎರಡನೇ ಅಲೆಯ ಅಬ್ಬರವನ್ನು ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗಿತ್ತು. ಜೂನ್‌ 07ಕ್ಕೆ ಅಂತ್ಯಗೊಳ್ಳಬೇಕಿದ್ದ ಲಾಕ್‌ಡೌನ್‌ಅನ್ನು ಜೂನ್‌ 14ರ ವರೆಗೆ ಸಿಎಂ ಬಿಎಸ್‌ವೈ ವಿಸ್ತರಿಸಿದ್ದರು. ಇದೀಗ ಲಾಕ್‌ಡೌನ್‌ ಸಡಿಲಗೊಳಿಸುವ ಚರ್ಚೆಗಳು ನಡೆಯುದ್ದು, ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಇನ್ನು ರಾಜ್ಯದಲ್ಲಿ ಮೂರು ಹಂತಗಳಲ್ಲಿ ಅನ್ ಲಾಕ್ ಮಾಡಲು ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ. ಮೊದಲ ಹಂತದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆ ಇರುವ ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಎರಡನೇ ಹಂತದಲ್ಲಿ ಬಹುತೇಕ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವ ಸಾಧ್ಯತೆಯಿದ್ದು, ಮೂರನೇ ಹಂತದಲ್ಲಿ ಔಟ್ ಡೋರ್ ಚಟುವಟಿಕೆ, ಮಾರುಕಟ್ಟೆ, ಜಿಮ್, ಥಿಯೇಟರ್ ಗಳನ್ನು ತೆರೆಯಲು ಅವಕಾಶ ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಒಂದೇ ಬಾರಿ 10 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ; ವಿಶ್ವ ದಾಖಲೆಯ ಮಹಾತಾಯಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights