ಬೆಂಗಳೂರು ನೋಡಿದ್ರೆ ನನಗೂ ಭಯವಾಗುತ್ತೆ : ಸಚಿವ ಸುಧಾಕರ್..!

ಕೊರೊನಾ ಎರಡನೆ ಅಲೆಯಿಂದ ತತ್ತರಿಸಿದ್ದ ರಾಜ್ಯದಲ್ಲಿ ಈಗ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸೋಂಕಿತರ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹೀಗಾಗಿ ಸರ್ಕಾರ ಎಲ್ಲೆಲ್ಲಿ ಕಡಿಮೆ ಸೋಂಕು ಇರುತ್ತೋ ಆಯಾ ಜಿಲ್ಲೆಗಳಲ್ಲಿ ಅನ್ಲಾಕ್‌ ಮಾಡೋದಕ್ಕೆ ನಿರ್ಧರಿಸಿದೆ. ಈ ಮಧ್ಯೆ ಸಚಿವ ಸುಧಾಕರ್ ಮಾತನಾಡಿದ್ದು, ಬೆಂಗಳೂರು ಕಂಡರೆ ನನಗೂ ಭಯವಾಗುತ್ತೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸ್ವಲ್ಪ‌ ಎಚ್ಚರ ತಪ್ಪಿದ್ರು ಅಪಾಯ ಗ್ಯಾರಂಟಿ. ಇಲ್ಲಿ ಸಾಕಷ್ಟು ಜನ ವಾಸಿಸುತ್ತಿದ್ದಾರೆ. ಸಾಧ್ಯವಾದಷ್ಟು ಎಚ್ಚರಿಕೆಯಿಂದಿರಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

ಜೂನ್ 14ರಿಂದ ಹಂತ ಹಂತವಾಗಿ ಕ್ರಮೇಣ ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಪ್ರಸ್ತುತ ಮಾರ್ಗಸೂಚಿಯಲ್ಲಿ ಜಾರಿಯಲ್ಲಿರುವ ನಿಯಮಗಳು ಯಥಾಸ್ಥಿತಿ ಮುಂದುವರೆಯಲಿದೆ.

ಉಳಿದ ಜಿಲ್ಲೆಗಳಲ್ಲಿ ಕಾರ್ಖಾನೆಗಳನ್ನು ಶೇ.50% ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದ್ದು, ಗಾರ್ಮೆಂಟ್ಸ್ ಕಾರ್ಖಾನೆಗಳು ಶೇ.30% ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ
ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರಲಿದೆ.

ಜೂನ್ 14ರಿಂದ ಹಂತ ಹಂತವಾಗಿ ಕ್ರಮೇಣ ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಲು ನಿರ್ಧರಿಸಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಪ್ರಸ್ತುತ ಮಾರ್ಗಸೂಚಿಯಲ್ಲಿ ಜಾರಿಯಲ್ಲಿರುವ ನಿಯಮಗಳು ಯಥಾಸ್ಥಿತಿ ಮುಂದುವರೆಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights