ನಮ್ಮ ಫೋನ್‌ ಕರೆಗಳನ್ನು ಕದ್ದಾಲಿಸಲಾಗುತ್ತಿದೆ: ಕಾಂಗ್ರೆಸ್‌ ಶಾಸಕರ ಆರೋಪ!

ನಮ್ಮ ಕೆಲವು ಶಾಸಕರ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ರಾಜಸ್ಥಾನದ ಕಾಂಗ್ರೆಸ್‌ ಶಾಸಕ ವೇದ ಪ್ರಕಾಶ್‌ ಸೋಲಂಕಿ ಆರೋಪಿಸಿದ್ದಾರೆ.

ನನ್ನ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿದೆ ಎನ್ನುವುದು ಗೊತ್ತಿಲ್ಲ. ಆದರೆ, ಕೆಲವು ಶಾಸಕರು ಈ ಬಗ್ಗೆ ನನ್ನ ಬಳಿ ಹೇಳಿಕೊಂಡಿದ್ದಾರೆ. ದೂರವಾಣಿ ಕರೆಗಳ ಕದ್ದಾಲಿಕೆಯಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದೆಯೇ ಎನ್ನುವುದು ಸಹ ನನಗೆ ಗೊತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಅವರ ಖಾಸ ಬೆಂಬಲಿಗ ಶಾಸಕ ಸೋಲಂಕಿ ಹೇಳಿದ್ದಾರೆ.

ಶಾಸಕರನ್ನು ಸಿಲುಕಿಸಲು ಕದ್ದಾಲಿಕೆ ನಡೆಸಲಾಗುತ್ತಿದೆ ಎಂದು ಹಲವು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ, ಯಾವುದೇ ಶಾಸಕರ ಹೆಸರನ್ನು ಅವರು ಹೇಳಿಲ್ಲ. ಸದ್ಯ, ದೂರವಾಣಿ ಕದ್ದಾಲಿಕೆ ಪ್ರಕರಣ ರಾಜಸ್ಥಾನದ ಅಶೋಕ್‌ ಗೆಹ್ಲೋಟ್‌ ಸರ್ಕಾರಕ್ಕೆ ಹೊಸ ಸಮಸ್ಯೆಯನ್ನು ತಂದೊಡ್ಡಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್‌ ಪೂನಿಯಾ, ‘ತನ್ನ ಶಾಸಕರಿಗೆ ಕಾಂಗ್ರೆಸ್‌ ಬೆದರಿಕೆ ಹಾಕುತ್ತಿದೆ. ಶಾಸಕರ ವಿರುದ್ಧವೇ ಬೇಹುಗಾರಿಕೆ ನಡೆಸಲಾಗುತ್ತಿದೆ. ಈ ಶಾಸಕರು ಯಾರು ಎನ್ನುವುದನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ: ಸಂಜಯ್ ರಾವತ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights