ರಾಬರ್ಟ್​ ಸಿನಿಮಾದ ನಿರ್ಮಾಪಕನ ಕೊಲೆಗೆ ಸಂಚು; 12 ರೌಡಿ ಶೀಟರ್‌ಗಳ ಬಂಧನ!

ನಟ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೇಶ್​ ಅಲಿಯಾಸ್​ ಕರಿಯ ರಾಜೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ವರ್ಷ ಉಮಾಪತಿ ಶ್ರೀನಿವಾಸ್​ ಗೌಡ ಮತ್ತು ಅವರ ಸಹೋದರ ದೀಪಕ್​ ಅವರ ಹತ್ಯೆಗೆ ಸಂಚುರೂಪಿಸಲಾಗಿತ್ತು. ಅಲ್ಲದೆ, ಕೊಲೆ ಬೆದರಿಕೆ ಹಾಕಿದ್ದರು. ಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್‌ ಬಾಂಬೆ ರವಿ ಎಂಬಾತನ ಹನ್ನೊಂದು ಸಹಚರರನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಆತನ ಮತ್ತೊಬ್ಬ ಸಹಚರ ರಾಜೇಶ್‌ ನೇಪಾಳದಲ್ಲಿ ತಲೆ ಮರೆಸಿಕೊಂಡಿದ್ದ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರ ತಂಡ ಅಲ್ಲಿಗೆ ತೆರಳಿ ಕಾರ್ಯಾಚರಣೆ ನಡೆಸಿದ್ದು, ಇದೀಗ ಆತನನ್ನು ಬಂಧಿಸಿದ್ದಾರೆ.

ಈ ಹಿಂದೆ ಕೊಲೆಯಾದ ಹಳೆ ರೌಡಿ ಪರಂದಾಮಯ್ಯನ ಜೊತೆ ಇರುತ್ತಿದ್ದ ಕರಿಯ ರಾಜೇಶ್​ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್ ನಟನೆಯ ‘ರಾಬರ್ಟ್​’ ಚಿತ್ರವನ್ನು ನಿರ್ಮಾಣ ಮಾಡಿರುವ ಉಮಾಪತಿ ಶ್ರೀನಿವಾಸ್​ ಗೌಡ ಅವರು ಈ ಚಿತ್ರದಿಂದ ಲಾಭ ಗಳಿಸಿದ್ದರು. ಈಗ ಶ್ರೀಮುರಳಿ ನಟನೆಯ ‘ಮದಗಜ’ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್​ ಗೌಡ ಅವರು ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್‌ 16 ಕೋಟಿ ಹಗರಣ; ಆರೋಪ ಮಾಡಿದವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ವಿಹೆಚ್‌ಪಿ ಸೂಚನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights