ಅಸ್ಸಾಂನ ಕಾಂಗ್ರೆಸ್ ಶಾಸಕ ರುಪ್‌ಜ್ಯೋತಿ ಕುರ್ಮಿ ರಾಜೀನಾಮೆ; ಬಿಜೆಪಿಗೆ ಸೇರ್ಪಡೆ!

ಅಸ್ಸಾಂನ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ನ ಶಾಸಕ ರುಪ್‌ಜ್ಯೋತಿ ಕುರ್ಮಿ ​​ಅವರು ಶುಕ್ರವಾರ ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ಅಸ್ಸಾಂನ ಮರಿಯಾನಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಶಾಸಕ ರುಪ್‌ಜ್ಯೋತಿ ಕುರ್ಮಿ ​​ಅವರು ವಿಧಾನಸಭಾ ಕಚೇರಿಯಲ್ಲಿ ಸ್ಪೀಕರ್ ಬಿಸ್ವಾಜಿತ್ ಡೈಮರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಚಹಾ ಸಮುದಾಯ ಮುಖಂಡರಾಗಿರುವ ಅವರು ಕಾಂಗ್ರೆಸ್‌ ಪಕ್ಷದ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿರುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಶಾಸಕರಾಗಿದ್ದ ಅವರು ಜೂನ್ 21 ರಂದು ಕೇಸರಿ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ.

ಇತ್ತೀಚೆಗೆ, “ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ” ಕುರ್ಮಿ ಅವರನ್ನು ಪಕ್ಷದಿಂದ ಕಾಂಗ್ರೆಸ್‌ ಹೊರಹಾಕಿತ್ತು. ಈ ನಿರ್ಧಾರವನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಅಂಗೀಕರಿಸಿದೆ ಎಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಜಿ ಶಾಸಕ ರಾಣಾ ಗೋಸ್ವಾಮಿ ನೇತೃತ್ವದಲ್ಲಿ ಬೋರಾ ಅವರು ಮೂವರು ಸದಸ್ಯರ ತಂಡವನ್ನು ರಚಿಸಿದ್ದಾರೆ. ಮರಿಯಾನಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲು ಮತ್ತು ಅಲ್ಲಿನ ರಾಜಕೀಯ ಪರಿಸ್ಥಿತಿಯನ್ನು ವಿಶ್ಲೇಷಿಸಲು ತಂಡ ಹೋಗಲಿದೆ ಎಂದು ಅವರು ತಿಳಿಸಿದ್ದಾರೆ.

ಥೌರಾ ಶಾಸಕ ಸುಶಾಂತ ಬೋರ್ಗೊಹೈನ್ ಮತ್ತು ಮನೋಜ್ ಧನೊವರ್ ತಂಡದ ಇತರ ಸದಸ್ಯರಾಗಿದ್ದಾರೆ.

ಚಹಾ ಬುಡಕಟ್ಟು ಸಮುದಾಯದ ಪ್ರಮುಖ ಸದಸ್ಯರಾದ ಕುರ್ಮಿ ​​ಮಾಜಿ ಕಾಂಗ್ರೆಸ್ ಸಚಿವ ದಿವಂಗತ ರೂಪಮ್ ಕುರ್ಮಿಯವರ ಪುತ್ರರಾಗಿದ್ದು, 2006 ರಿಂದ ಮರಿಯಾನಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಇದನ್ನೂ ಓದಿ: ನಂದಿಗ್ರಾಮದಲ್ಲಿ ಸುವೇಂದು ಗೆಲುವು ಸಂಶಯ: ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಅರ್ಜಿ ಇಂದು ವಿಚಾರಣೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights