ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ ಸ್ಪರ್ಧೆ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕಾವು ಸದ್ದು ಮಾಡಿ, ಸದ್ಯಕ್ಕೆ ತಣ್ಣಕಾಗುತ್ತಿದೆ. ಈ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿಯೂ ಆಂತರಿಕ ಬಿಕ್ಕಟ್ಟು ಕಾಣಿಸಿಕೊಳ್ಳುತ್ತಿದೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಇದೀಗ, ಅಂತಹ ಬಿಕ್ಕಟ್ಟು ಇಲ್ಲ ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಸಾಮೂಹಿಕ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು ಎಂದು ಚರ್ಚೆ ನಡೆಯುತ್ತಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಎಂ ಹುದ್ದೆಯ ಬಗ್ಗೆ ಈಗಲೇ ಮಾತನಾಡದಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವರಿಗೆ ಎಚ್ಚರಿಕೆ ನೀಡಿದ್ದೇವೆ. ಪಕ್ಷಕ್ಕೆ ಹಾನಿಯಾಗುವಂತಹ ಯಾವುದೇ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದು ಪಕ್ಷದ ಹೈಕಮಾಂಡ್‌ ಕೂಡ ಹೇಳಿದೆ. ಪಕ್ಷದ ಯಾವುದೇ ಮುಖಂಡರು, ಕಾರ್ಯಕರ್ತರ ಬಗ್ಗೆ ನಕಾರಾತ್ಮಕವಾಗಿ ಯಾರೂ ಮಾತನಾಡಬಾರದು ಎಂದು ಪಕ್ಷದ ಮುಖಂಡರಿಗೆ ಸೂಚಿಸಿದ್ದೇವೆ. ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ ಕಣಕ್ಕಿಳಿಯಿದೆ ಎಂದು ಅವರು ಹೇಳಿದ್ದಾರೆ.

ಭವಿಷ್ಯದಲ್ಲಿ, ಯಾವುದೇ ಹೇಳಿಕೆ ನೀಡುವಾಗ, ಅವರು ಪಕ್ಷದ ಪ್ರತಿನಿಧಿ ಎಂಬುದನ್ನು ಮರೆಯಬಾರದು. ಅಂತಹ ವಿಷಯಗಳನ್ನು ಮತ್ತೆ ಪುನರಾವರ್ತಿಸಬಾರದು’ ಎಂದು ಅವರು ಹೇಳಿದ್ದಾರೆ.

ಜಮೀರ್ ಅಹ್ಮದ್ ಅವರನ್ನು ಮಾಜಿ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಅವರ ನಿಷ್ಠಾವಂತರೆಂದು ಪರಿಗಣಿಸಲಾಗಿದೆ ಮತ್ತು 2023 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರವಾದ ಚಾಮರಾಜಪೇಟೆಯಿಂದ ಸ್ಪರ್ಧಿಸಲು ಸಹ ಅವಕಾಶ ನೀಡಿದ್ದಾರೆ. ನಗರದ ಚಾಮರಾಜ್‌ಪೇಟೆ ವಿಭಾಗವು ಅಲ್ಪಸಂಖ್ಯಾತ ಜನಸಂಖ್ಯೆಯನ್ನು ಹೊಂದಿದೆ.

ಇದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಗಳ ಹಾದಿಗೆ ಅಡ್ಡ ಬರಬಹುದು, ಏಕೆಂದರೆ ಅವರೂ ಸಹ ಮುಖ್ಯಮಂತ್ರಿಯಾಗಲು ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತದೆ.ಅವರ ಕೆಲವು ಬೆಂಬಲಿಗರು ಈಗಾಗಲೇ ಅವರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಆಂಧ್ರ ರಾಜ್ಯಪಾಲರಾಗಿ ಯಡಿಯೂರಪ್ಪ? ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಖಚಿತ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights