ಅಪ್ಪಂದಿರ ದಿನವೇ ಮಂಡ್ಯದಲ್ಲಿ ದುರಂತ; ಅತ್ತ ಮಗಳು ಸಾವು; ಇತ್ತ ತಂದೆಗೆ ಹೃದಯಾಘಾತ

ಇಂದು ವಿಶ್ವ ಅಪ್ಪಂದಿರ ದಿನಾಚರಣೆ. ಈ ದಿನದಂದೇ ಮಂಡ್ಯದಲ್ಲಿ ಒಂದು ಮನಕಲಕುವ ಘಟನೆ ನಡೆದಿದೆ.

ಮಂಡ್ಯದ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ದುರಂತ ನಡೆದಿದೆ. ಖಾಸಗಿ ಪಿಯು ಕಾಲೇಜಿಗೆ ಸೇರಿಸುವ ವಿಷಯಕ್ಕೆ ಮನನೊಂದಿದ್ದ ಮಗಳು 17 ವರ್ಷದ ಬಾಂಧವ್ಯ ಬೆಳಗಿನ ಜಾವ ಮನೆಯಲ್ಲೇ ನೇಣಿಗೆ ಶರಣಾಗಿದ್ದರು. ಮಗಳ ಸಾವನ್ನು ನೋಡಿದ್ದ ತಂದೆ ರಾಜು (65) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಅಪ್ಪಂದಿರ ದಿನದಂದು ನಡೆದ ಈ ದುರಂತದಲ್ಲಿ ಅಪ್ಪ-ಮಗಳು ಇಬ್ಬರೂ ಸಾವಿನಲ್ಲಿ ಒಂದಾಗಿದ್ದಾರೆ. ವೈದ್ಯಯಾಗುವ ಕನಸು ಕಂಡಿದ್ದ ಬಾಂಧವ್ಯ, ದ್ವಿತೀಯ ಪಿಯುಸಿಗೆ ಖಾಸಗಿ ಕಾಲೇಜಿಗೆ ಸೇರಿಸುವಂತೆ ಕೇಳಿದ್ದಾರೆ. ಒಂದು ವರ್ಷ ಸರ್ಕಾರಿ ಕಾಲೇಜಿನಲ್ಲಿ ಓದಲು ರೈತರಾಗಿದ್ದ ತಂದೆ ರಾಜು ತಿಳಿಸಿದ್ದಾರೆ. ಈ ವಿಷಯದಿಂದ ಮಗಳು ಮತ್ತು ತಂದೆ ನಡುವೆ ಮನಸ್ತಾಪ ಉಂಟಾಗಿತ್ತು. ಮನನೊಂದಿದ್ದ ಬಾಲಕಿ ಮನೆಯಲ್ಲೇ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮಗಳು ನೇಣಿಗೆ ಶರಣಾದ ವಿಚಾರ ಕೇಳಿದ ತಂದೆ ರಾಜುಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಅಪ್ಪ-ಮಗಳ ಸಾವಿನ ಸುದ್ದಿಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆದ್ದು, ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ರಾಜ್ಯದಲ್ಲಿ 3.4 ಲಕ್ಷ ಮಕ್ಕಳು ಕೋವಿಡ್‌ಗೆ ಒಳಗಾಗುವ ಆತಂಕ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights