ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ನಿರ್ಧರಿಸಿದ್ದು ಸತ್ಯ: ರಮೇಶ್‌ ಜಾರಕಿಹೊಳಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು ಸತ್ಯ. ಮನನೊಂದು ಆ ನಿರ್ಧಾರ ಮಾಡಿದ್ದೆ. ಆದರೆ, ಕೆಲವು ಹಿರಿಯರ ಸಲಹೆಯ ಮೇರೆಗೆ ನಾನು ನಿರ್ಧಾರ ಬದಲಿಸಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇನ್ನೂ ಎಂಟು-ಹತ್ತು ದಿನಗಳ ಕಾಲ ನಾನು ಏನೂ ಹೇಳುವುದಿಲ್ಲ. ಒಂದು ವೇಳೆ ರಾಜೀನಾಮೆ ಕೊಡುವುದಾದರೆ ನಾನೊಬ್ಬನೇ ಕೊಡುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತೇನೆ ಎಂದು ಪ್ರಚಾರ ಮಾಡಲಾಗುತ್ತಿದೆ. ಅದು ಸುಳ್ಳು. ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ನಾನೇಕೆ ಕಾಂಗ್ರೆಸ್‌ ಸೇರಲಿ ಎಂದು ಅವರು ಹೇಳಿದ್ದಾರೆ.

ನಾನು ಬಿಜೆಪಿಗೆ ದ್ರೋಹ ಎಸಗುವ ಕೆಲಸ ಮಾಡುವುದಿಲ್ಲ. ಯಡಿಯೂರಪ್ಪನವರು ಇನ್ನೆರಡು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಯಲ್ಲಿ ನಾವು ಗೆದ್ದು ಬರುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಚಿರಾಗ್‌ಗೆ ತೇಜಸ್ವಿ ಗಾಳ: ಪಾಸ್ವಾನ್‌ ಮುಂದೆ RSS – ಅಂಬೇಡ್ಕರ್‌ ಆಯ್ಕೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights