ಜೆಡಿಎಸ್ ಮತ್ತು ಸುಮಲತಾ ನಡುವೆ ಗಣಿಕಾದಾಟ : ಅಂಬಿ ಅಭಿಮಾನಿಗಳಿಂದ ಪ್ರತಿಭಟನೆ!

ದಳಪತಿಗಳು ಹಾಗೂ ಸುಮಲತಾ ನಡುವೆ ವಾಕ್ಸಮರ ಇನ್ನೂ ಮುಗಿದಂತೆ ಕಾಣಿಸುತ್ತಿಲ್ಲ. ಕನ್ನಂಬಾಡಿ ಕಾಳಗದಲ್ಲಿ ದಳಪತಿಗಳು ಅಂಬರಿಶ್ ಹಾಗೂ ಸುಮಲತಾ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಂಬಿ ಅಭಿಮಾನಿಗಳ ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಂದು ನಗರದ ಅಂಬರೀಶ್ ಸಮಾಧಿ ಬಳಿ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಮೂಲಕ ದಳಪತಿಗಳಿಗೆ ಕೌಂಟರ್ ಕೊಡಲು ಸುಮ ಬೆಂಬಲಿಗರು ಮುಂದಾಗಿದ್ದಾರೆ.

ಅಂಬಿ ಹೆಸರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ, ಜೊತೆಗೆ ಅಂಬಿ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆಂದು ಆರೋಪಿಸಿ ಅಂಬಿ ಅಭಿಮಾನಿಗಳು ದಳಪತಿಗಳ ವಿರುದ್ಧ ಕಿಡಿ ಕಾರಿದ್ದಾರೆ.

ಅಂಬಿ ಕಾಲದಲ್ಲಿ ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎನ್ನುವ ಮಾತಿಗೆ ದಳಪತಿಗಳಿಗೆ ಕೌಂಟರ್ ಕೊಡಲು ಸುಮ ಬೆಂಬಲಿಗರು ಮುಂದಾಗಿದ್ದಾರೆ. ಅಂಬಿ ಸಮಾಧಿ ಬಳಿ ಜಮಾಯಿಸುತ್ತಿರುವ ಅಂಬಿ ಅಭಿಮಾನಿಗಳು ಸುಮಲತಾ ಬೆಂಬಲಕ್ಕೆ ನಿಂತಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights