ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಪ್ರಮಾಣವಚನ ಸ್ವೀಕಾರ..!
ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಥಾವರಚಂದ್ ಗೆಹಲೋತ್ ಅವರು ಇಂದು ರಾಜ್ಯದ 19 ನೇ ರಾಜ್ಯಪಾಲರಾಗಿ ನಗರದ ರಾಜಭವನದ ಗಾಜಿನ ಮನೆಯಲ್ಲಿ ಪ್ರವಾಣ ವಚನ ಸ್ವೀಕರಿಸಿದರು. ವಿ ಆರ್ ವಾಲಾರಿಂದ ಅಧಿಕಾರ ಹಸ್ತಾಂತರಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಆರ್ ಅಶೋಕ್,ಡಿಸಿಎಂ ಕಾರಜೋಳ, ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಸುಧಾಕರ್, ಸಂಸದೆ ಸುಮಲತಾ ಭಾಗಿಯಾಗಿದ್ದರು.