ಎಂಎಸ್‌ಪಿ ಅಕ್ಕಿ ಸಾಗಾಣಿಕೆಯಲ್ಲಿ ಅಕ್ರಮ; ಬಿಜೆಪಿಯದ್ದು ಕನ್ನಭಾಗ್ಯ ಎಂದು ಕಾಂಗ್ರೆಸ್‌ ವ್ಯಂಗ್ಯ!

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಖರೀದಿಸಿರುವ ಅಕ್ಕಿ ಸಾಗಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಸರ್ಕಾರದ ವಿರುದ್ದ ಕಿಡಿಕಾರಿರುವ ಕರ್ನಾಟಕ ಕಾಂಗ್ರೆಸ್‌, ‘ಬಿಜೆಪಿಯದ್ದು ಕನ್ನಭಾಗ್ಯ’ ಎಂದು ವ್ಯಂಗ್ಯವಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕಾಂಗ್ರೆಸ್‌ನದ್ದು ಅನ್ನಭಾಗ್ಯ, ಬಿಜೆಪಿಯದ್ದು ಕನ್ನಭಾಗ್ಯ! ಎಂದು ಕಿಡಿಕಾರಿದೆ. 

ಬಿಜೆಪಿ ಆಡಳಿತದಲ್ಲಿ ಬಡವರ ಪಡಿತರ ಅಕ್ಕಿಯ ಕಳ್ಳ ಸಾಗಣೆ  ಎಗ್ಗಿಲ್ಲದೆ ಸಾಗಿದರೂ ತಡೆಗಟ್ಟುವ ಯಾವ ಕ್ರಮವನ್ನೂ ಸರ್ಕಾರ ಕೈಗೊಂಡಿಲ್ಲ. ಸರ್ಕಾರದ ನಿರ್ಲಕ್ಷ್ಯ ನೋಡಿದರೆ, ಇದರಲ್ಲಿ ಬಿಜೆಪಿಗರ ಪಾಲುದಾರಿಕೆಯೂ ಇರುವಂತಿದೆ. ಸಿಎಂ ಯಡಿಯೂರಪ್ಪ ಅವರೇ, ಕೂಡಲೇ ಈ ಕಳ್ಳದಂಧೆ ತಡೆಗಟ್ಟಿ ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. 

ಇದನ್ನೂ ಓದಿ: ರಾಜಕೀಯಕ್ಕೆ ಗುಡ್‌ ಬೈ ಹೇಳಿದ ನಟ ರಜಿನಿಕಾಂತ್‌; ಆರ್‌ಎಂಎಂ ಪಕ್ಷ ವಿಸರ್ಜನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights