ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ : ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆ!
ಇಂದು ಬೆಳಿಗ್ಗೆಯಿಂದಲೂ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಇದರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ನಾನಿ ಗವಾಸ್ಕರ್ ಹೇಳಿದ್ದಾರೆ.
ವಾಯುಭಾರ ಕುಸಿತದಿಂದ ಮುಂದಿನ 5 ದಿನ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಇರಲಿದೆ. 5 ದಿನ ಬಿಸಿಲು ಇರಲಿದೆ ಎಂದು ಹೇಳಿದ್ದಾರೆ.
ಇಂದು ಬೆಳ್ಳಂಬೆಳಿಗ್ಗೆ ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆಯಾಗುತ್ತಿದ್ದು ಕೆಲಸಕ್ಕೆ ಹೋಗುವ ಸವಾರರು ಕಿರಿಕಿರಿ ಅನುಭವಿಸುವಂತಾಯಿತು. ಮೋಡ ಕವಿದ ವಾತಾವಣ ನಗರದಲ್ಲಿ ಆವರಿಸಿದ್ದು ಕೆ.ಆರ್. ಸರ್ಕಲ್ಲ, ಆನಂದರಾವ್ ಸರ್ಕಲ್, ಫ್ರೀಡಂ ಪಾರ್ಕ್, ಅವೆನ್ಯೂ ರೋಡ್ ಸುತ್ತಮುತ್ತ ಜಿಟಿ ಜಿಟಿ ಮಳೆಯಾಗುತ್ತಿದೆ.