ಕೊರೊನಾ ನಿಯಮ ಸಡಿಲ : ನಾಳೆ ಥಿಯೇಟರ್, ಜು.26ರಿಂದ ಕಾಲೇಜ್ ಓಪನ್!
ರಾಜ್ಯದಲ್ಲಿ ಕೊರೊನಾ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದ್ದು, ನಾಳೆಯಿಂದಲೇ ಥಿಯೇಟರ್ ಗಳು ತೆರೆಯಲಿದ್ದು ಜುಲೈ 26 ರಿಂದ ಕಾಲೇಜುಗಳು ಓಪನ್ ಆಗಲಿವೆ ಎಂದು ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ.
ಇಂದು ಸಿಎಂ ಅಧಿಕೃತ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿ ಸಿಎಂ ಈ ಆದೇಶವನ್ನು ಹೊರಡಿಸಿದ್ದಾರೆ. ನಾಳೆಯಿಂದಲೇ ರಾಜ್ಯದಲ್ಲಿ ಅನ್ ಲಾಕ್ 4.O ಜಾರಿಗೆ ಬರಲಿದ್ದು ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿಯಲ್ಲಿ ಒಂದು ಗಂಟೆ ಸಡಿಲಗೊಳಿಸಿ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ವಿಧಿಸಿ ಆದೇಶಿಸಿದ್ದಾರೆ. ಜೊತೆಗೆ ಥಿಯೇಟರ್ ಗಳ ಬಾಗಿಲು ತೆರೆಯಲಿದೆ. ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ.
ಹೊಸ ಮಾರ್ಗಸೂಚಿ ಆದೇಶ ಹೊರಬಂದಿದ್ದು ನಾಳೆಯಿಂದಲೇ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ. ಸಿನಿಮಾ ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಸೀಟುಗಳ ಭರ್ತಿಯೊಂದಿಗೆ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ನೀಡಲಾಗಿದೆ. ಅಲ್ಲದೆ ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ.
ಪದವಿ ತರಗತಿಗಳನ್ನು ಜುಲೈ 26ರಿಂದ ಪ್ರಾರಂಬಿಸಲು ಆದೇಶಿಸಿದ್ದು ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಕೊರೋನಾ ಲಸಿಕೆ ಪಡೆದು ತರಗತಿಗಳಿಗೆ ಹಾಜರಾಗಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.