ಅಸ್ಸಾಂ, ಉತ್ತರಾಖಂಡದ ನಂತರ ಕರ್ನಾಟಕ; 30 ದಿನಗಳಲ್ಲಿ ಯಡಿಯೂರಪ್ಪ ರಾಜೀನಾಮೆ ನೀಡುವ ಸಾಧ್ಯತೆ!

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಸಾರ್ವಜನಿಕವಾಗಿ ನಗುವುದು ವಿರಳ. ಅವರು ತಮ್ಮ ಭಾವನೆಗಳನ್ನು ತನ್ನಲ್ಲಿಯೇ ಇಟ್ಟುಕೊಳ್ಳುತ್ತಾರೆ. ಹೀಗಿರುವಾಗ, ಜುಲೈ 17 ರಂದು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂಬ ಸುದ್ದಿಯಲ್ಲಿ ಸತ್ಯವಿಲ್ಲ ಎಂದು ಹೇಳುವಾಗ ಅದು ಸರಳ ನಿರಾಕರಣೆಗಿಂತ ಹೆಚ್ಚಿನ ವಿಶ್ವಾಸವನ್ನು ಹೊಂದಿತ್ತು.

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪ ಕೆಲವೇ ದಿನಗಳಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯಬಹುದು. ಕರ್ನಾಟಕ ಮುಖ್ಯಮಂತ್ರಿ ಜುಲೈ 26 ರಿಂದ ಆಗಸ್ಟ್ 15 ರ ನಡುವೆ ಯಾವುದಾದರೂ ಒಂದು ದಿನ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ದಿ ಕ್ವಿಂಟ್‌ ವರದಿ ಮಾಡಿದೆ.

ಉತ್ತರ ಪ್ರದೇಶದ ನಂತರ ಕರ್ನಾಟಕದಲ್ಲಿ ನಾಕತ್ವದ ಪ್ರಶ್ನೆ: 

ಯಡಿಯೂರಪ್ಪ ಅವರ ಧಾರ್ಮಿಕ ನಂಬಿಕೆಗಳ ಕಾರಣದಿಂದಾಗಿ ಅವರ ರಾಜೀನಾಮೆ ದಿನಾಂಕದ ಬಗ್ಗೆ ಅನಿಶ್ಚಿತತೆಯನ್ನು ಉಂಟುಮಾಡಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಸಂಖ್ಯಾಶಾಸ್ತ್ರದಲ್ಲಿ ನಂಬಿಕೆ ಹೊಂದಿರುವ ಧಾರ್ಮಿಕ ವ್ಯಕ್ತಿಯಾದ ಯಡಿಯುರಪ್ಪ ಅವರು ಆಗಸ್ಟ್ 8 ರಂದು ಆಶಾಡಾ ತಿಂಗಳು ಮುಗಿಯುವವರೆಗೂ (ದುರುದ್ದೇಶಪೂರಿತವೆಂದು) ಕಾಯಲು ಬಯಸುತ್ತಾರೆ.

ಯಡಿಯೂರಪ್ಪ ಅವರನ್ನು ಬದಲಿಸುವ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ ನಿರ್ಧಾರದ ಬಗೆಗಿನ ಪ್ರಶ್ನೆಯನ್ನು ಪಕ್ಷದ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ನಿರಾಕರಿಸಿದ್ದಾರೆ.

ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ಶಾಸಕರು, ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ನಂತರ ಹೈಕಮಾಂಡ್‌ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಬಹುದು ಎಂದು ಆಶಿಸಿದ್ದರು. ಆದರೆ, ಉತ್ತರಪ್ರದೇಶದಲ್ಲಿ ಭಿನ್ನಮತೀಯರನ್ನು ಶಾಂತಗೊಳಿಸಿದ ನಂತರವೇ ಪಕ್ಷವು ಕರ್ನಾಟಕದ ವಿಚಾರವನ್ನು ಕೈಗೆತ್ತಿಕೊಳ್ಳಲಿದೆ ಎಂದು ಪಕ್ಷದ ವಲಯದಲ್ಲಿ ತಿಳಿದುಬಂದಿದೆ.

ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ ಅವರು ಏನು ಮಾತನಾಡಿದ್ದಾರೆ?

ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾಗ ಮೋದಿಯವರನ್ನು ಭೇಟಿ ಮಾಡಿ 10 ನಿಮಿಷಗಳ ಕಾಲ ಸಭೆ ನಡೆಸಿದ್ದಾರೆ. ಈ ವೇಳೆ ಅವರು 2023ರಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೂ ತಮ್ಮ ಅಧಿಕಾರವನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಸಭೆಯ ಆರಂಭದಲ್ಲಿ ಕೇಳಿಕೊಂಡಿದ್ದಾರೆ.

ಆದರೆ, ಪಕ್ಷದ ಎಲ್ಲ ನಾಯಕರು ಯುವ ಪೀಳಿಗೆಗೆ ದಾರಿ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಪ್ರಧಾನಿ ಮೋದಿಯವರು ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಗೆ ಸಿಕ್ಕಿದ್ದು ಅಲ್ಪವಿರಾಮ; ನಾಯಕತ್ವ ಬದಲಾವಣೆ ಕಟ್ಟಿಟ್ಟ ಬುತ್ತಿ: ಬಿಜೆಪಿ ಸುಳಿವು

ಹೀಗಾಗಿ, ಸಿಎಂ ಬಿಎಸ್‌ವೈ ‘ಅನಾರೋಗ್ಯದ ಕಾರಣ’ ನೀಡಿ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಆದರೆ, ಅದರ ನಂತರ ಪಿಎಂ ಮೋದಿ ಅವರು ‘ದಯವಿಟ್ಟು ನೀವು ಹೊರಡುವ ಮೊದಲು ಐದು ನಿಮಿಷಗಳ ಕಾಲ ಕುಳಿತುಕೊಳ್ಳಿ’ ಎಂದು ಯಡಿಯೂರಪ್ಪ ಅವರಿಗೆ ಹೇಳಿದರು ಎಂದು ತಿಳಿದು ಬಂದಿದೆ.

ಇತರ ನಾಯಕರೊಂದಿಗಿನ ಸಭೆಯಲ್ಲಿ, ಪಕ್ಷವನ್ನು ಬಲಪಡಿಸುವ ಮತ್ತು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಜಯಗಳಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿಯನ್ನು ಕೇಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವು ಕೆಟ್ಟ ಪ್ರದರ್ಶನ ನೀಡಿದೆ. ಈ ಚುನಾವಣೆಗಳಲ್ಲಿ ಬಿಜೆಪಿ 3ನೇ ಸ್ಥಾನ ಪಡೆದುಕೊಂಡಿದೆ. ಅಲ್ಲದೆ, ಮೇ ತಿಂಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬೆಳಗಾವಿಯನ್ನು ಅತ್ಯಂತ ಕಡಿಮೆ ಮಾರ್ಜಿನ್‌ನಲ್ಲಿ ಬಿಜೆಪಿ ಗೆದ್ದಿದೆ. ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿದೆ.

ಅಮಿತ್ ಶಾ ಜೊತೆಗೆ ಒಪ್ಪಂದ?

ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಜುಲೈ 16-17 ರಂದು ಕಳೆದ 24 ಗಂಟೆಗಳಲ್ಲಿ, ಬಿಜೆಪಿಯ ಎಲ್ಲ ಉನ್ನತ ನಾಯಕರನ್ನು ಭೇಟಿಯಾದರು. ಅವರು ತಮ್ಮ ಮುಂದುವರಿಕೆ ಅಥವಾ ರಾಜೀನಾಮೆಯ ಬಗ್ಗೆ ಅಂತಿಮ ಹೇಳಿಕೆಯನ್ನು ಹೊಂದಿದ್ದಾರೆ.

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ, ಯಡಿಯೂರಪ್ಪ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡದೆ ವಿಶೇಷ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು.

ಅದರೆ, ಅವರಿಗೆ ಬುಲಾವ್ ನೀಡಿದ ನಂತರ ವಾಪಸ್‌ ಹೋದ ಯಡಿಯೂರಪ್ಪ, ಅಮಿತ್ ಶಾ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಅವರು ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಜುಲೈ 17 ರಂದು ತಡವಾಗಿ ಬೆಂಗಳೂರಿಗೆ ತಲುಪಿದ ಸಿಎಂ, ಈ ಹಿಂದೆ ತಮ್ಮ ರಾಜೀನಾಮೆಯ ಊಹಾಪೋಹಗಳನ್ನು ದೂರವಿಟ್ಟು ಭಿನ್ನರಾಗವನ್ನು ಹಾಡಿದ್ದಾರೆ.

“ನಾಯಕರ ಕೊರತೆಯಿಲ್ಲ ಎಂದು ನಾನು ಪುನರುಚ್ಚರಿಸುತ್ತೇನೆ ಮತ್ತು ಇದೀಗ ನನಗೆ ಜವಾಬ್ದಾರಿಯನ್ನು ನೀಡಲಾಗಿದೆ. ಸದ್ಯಕ್ಕೆ ಮುಂದುವರಿಯಲು ನನ್ನನ್ನು ಕೇಳಲಾಗಿದೆ. ಉನ್ನತ ನಾಯಕತ್ವ ಹೇಳಿದ್ದನ್ನು ನಾವು ಮಾಡಬೇಕು. ಮುಂದಿನ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ” ಎಂದು ಅವರು ಹೇಳಿದರು.

ಸುಗಮ ಬದಲಾವಣೆ ನಿರೀಕ್ಷಿಸಲಾಗಿದೆ:

ರಾಜೀನಾಮೆ ಪತ್ರಗಳನ್ನು ಪಡೆಯಲು ಅಂದಿನ ಉತ್ತರಾಖಂಡ ಮತ್ತು ಅಸ್ಸಾಂ ಮುಖ್ಯಮಂತ್ರಿಗಳನ್ನು ನವದೆಹಲಿಗೆ ಕರೆಸಿಕೊಂಡ ಮಾದರಿಯಲ್ಲಿ ಕರ್ನಾಟಕದಲ್ಲಿ ಸುಗಮವಾಗಿ ಅಧಿಕಾರ ಬದಲಾವಣೆ ಮಾಡಲು ಬಿಜೆಪಿ ನಾಯಕತ್ವ ಬಯಸಿದೆ ಎಂದು ಮೂಲಗಳು ತಿಳಿಸಿವೆ.

“ಕೊರೊನಾದಿಂದಾಗಿ ಬಿಬಿಎಂಪಿ ಮತ್ತು ಪಂಚಾಯಿತಿ ಚುನಾವಣೆಗಳನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಹೀಗಾಗಿ, ಶೀಘ್ರದಲ್ಲೇ ಯಾವುದೇ ಚುನಾವಣೆಗಳು ನಡೆಯದ ಕಾರಣ ನಾಯಕತ್ವ ಬದಲಾವಣೆ ಮಾಡಲು ಪಕ್ಷದ ಹೈಕಮಾಂಡ್‌ಗೆ ಇದೇ ಅತ್ಯುತ್ತಮ ಸಮಯ” ಎಂದು ಮೂಲವೊಂದು ತಿಳಿಸಿದೆ.

ಇದನ್ನೂ ಓದಿ: ಐದೇ ತಿಂಗಳಿಗೆ ಸಿಎಂ ಸ್ಥಾನ ಕಳೆದುಕೊಂಡ ತಿರತ್ ಸಿಂಗ್ ರಾವತ್‌; 6 ತಿಂಗಳಲ್ಲಿ BJPಯ 3 ಮುಖ್ಯಮಂತ್ರಿಗಳು!

2012ರಲ್ಲಿ ಬಿಜೆಪಿ ತೊರೆದು ಹೊಸ ಪಕ್ಷವನ್ನು ಕಟ್ಟಿದ್ದ ಯಡಿಯೂರಪ್ಪ, 2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಶಕ್ತಿ 110 ಸ್ಥಾನಗಳಿಂದ 40 ಸ್ಥಾನಗಳಿಗೆ ಕುಸಿಯುವಂತೆ ಮಾಡಿದ್ದರು. ಆದರೆ, ಈ ಬಾರಿ ಆ ರೀತಿ ಅಡೆತಡೆಗಳನ್ನು ಅವರು ಸೃಷ್ಟಿಸುವುದಿಲ್ಲ ಎಂಬ ವಿಶ್ವಾಸ ಬಿಜೆಪಿ ಹೈಕಮಾಂಡ್‌ಗೆ ಇದೆ. ಅಲ್ಲದೆ, ಅವರ ಇಬ್ಬರು ಗಂಡು ಮಕ್ಕಳಾದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಮತ್ತು ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜೇಂದ್ರ ಅವರ ಭವಿಷ್ಯವು ಯಡಿಯೂರಪ್ಪರಿಗೆ ಅತ್ಯಂತ ಮುಖ್ಯವಾಗಿದೆ. ಹೀಗಾಗಿ, ಪಕ್ಷದ ಹೈಕಮಾಂಡ್‌ನ ವಿಶ್ವಾಸವನ್ನು ಉಳಿಸಿಕೊಳ್ಳದೆ ಅವರ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲಾಗುವುದಿಲ್ಲ ಎಂಬುದು ಅವರಿಗೆ ಸ್ಪಷ್ಟವಾಗಿ ತಿಳಿದಿದೆ.

ಹೀಗಾಗಿ, ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಮಹಾರಾಷ್ಟ್ರ, ಆಂಧ್ರ ಅಥವಾ ತೆಲಂಗಾಣಕ್ಕೆ ರಾಜ್ಯಪಾಲರನ್ನಾಗಿ ನೇಮಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮಾತ್ರವಲ್ಲ, ಅವರ ಮಗ ವಿಜಯೇಂದ್ರ ಅವರಿಗೂ ಒಂದು ಪೋಸ್ಟ್‌ (ಡಿಸಿಎಂ) ನೀಡುವ ಬಗ್ಗೆ ಪ್ರಸ್ತಾಪವಿದೆ ಎಂದು ಹೇಳಲಾಗಿದ್ದು, ಆ ಬಗ್ಗೆಯೂ ಮಾತುಕತೆಗಳು ನಡೆಯುತ್ತಿವೆ.

ಪಂಚಮಾಸಲಿ ನಾಯಕರು ಈಗಾಗಲೇ ಯಡಿಯೂರಪ್ಪ ಅವರನ್ನು ದೂಷಿಸುತ್ತಿರುವುದರಿಂದ ಯಡಿಯೂರಪ್ಪ ಅವರ ಅನುಪಸ್ಥಿತಿಯು  ವರ್ಷಗಳಿಂದ ಬಿಜೆಪಿಗೆ ಬೆಂಬಲವಾಗಿ ನಿಂತಿರುವ ಲಿಂಗಾಯತರನ್ನು ದ್ವೇಷಿಸುವುದಿಲ್ಲ ಎಂದು ಹೇಳಲಾಗಿದೆ.

ಯಡಿಯೂರಪ್ಪ ಅವರಿಗೆ ಅಧಿಕಾರವನ್ನು ಉಳಿಸಿಕೊಳ್ಳುವುದು ಯಾವಾಗಲೂ ಕಷ್ಟಕರವಾಗಿದೆ. ಅವರು 2007 ರಲ್ಲಿ ಒಂದು ವಾರ, 2008 ರಲ್ಲಿ ಮೂರೂವರೆ ವರ್ಷ, ಮತ್ತು 2018 ರಲ್ಲಿ ಮೂರು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. 2021 ರಲ್ಲಿ, ಅವರು ಎರಡು ವರ್ಷ ಅಧಿಕಾರವನ್ನು ಪೂರ್ಣಗೊಳ್ಳುವ ಅವಕಾಶವನ್ನು ನಿರಾಕರಿಸಲಾಗುತ್ತದೆಯೇ? ಎಂಬ ಸಂಶವೂ ಈ ಸಂದರ್ಭದಲ್ಲಿ ಮುಂದಿದೆ.

ಮೂಲ: ದಿ ಕ್ವಿಂಟ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ

ಇದನ್ನೂ ಓದಿ: ರಾಜ್ಯ BJPಯಲ್ಲಿ ನಾಯಕತ್ವ ಬದಲಾವಣೆ ಫಿಕ್ಸ್‌!; ಬಿಎಸ್‌ವೈ ಮುಂದಿವೆ ಎರಡು ಆಯ್ಕೆಗಳು!?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights