ರಾಜ್ಯದಲ್ಲಿ ನಾಳೆಯಿಂದ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಅನುಮತಿ…!

ರಾಜ್ಯದಲ್ಲಿ ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಸಲಾಗಿದ್ದು ನಾಳೆಯಿಂದ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಕಳೆದ ಮೂರು ನಾಲ್ಕು ತಿಂಗಳಿನಿಂದಲೂ ಕೊರೊನಾ ವೈರಸ್ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಹಲವಾರು ನಿರ್ಬಂಧಗಳನ್ನು ಹೇರಿತ್ತು. ಇತ್ತೀಚೆಗೆ ಕೊರೊನಾ ಸೋಂಕಿತರ ಸಂಖ್ಯೆಗಲ್ಲಿ ಗಣನೀಯ ಇಳಿಕೆಯಾಗಿತ್ತು. ಮತ್ತೆ ರಾಜ್ಯ ಸಹಜ ಸ್ಥಿತಿಯತ್ತ ಮರುಗಳಿಸುತ್ತಿದೆ.

ಹೀಗಾಗಿ ನಾಳೆಯಿಂದ ಧಾರ್ಮಿಕ ಕ್ಷೇತ್ರಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದ್ದು, ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಜಾತ್ರೆ, ಮಹೋತ್ಸವ ಹೀಗೆ ವಿಶೇಷ ದಿನಗಳಲ್ಲಿ ಜನ ದಟ್ಟಣೆಗೆ ಅವಕಾಶ ನೀಡದಂತೆ ಮತ್ತು  ಪ್ರಸಾದ, ತೀರ್ಥ ಹಂಚಿಕೆಗೆ ಅನುಮತಿ ನೀಡಲಾಗಿಲ್ಲ.

ಕಳೆದ ಸೋಮವಾರ ಅಂದರೆ ಜು.19ರಿಂದ ಅನ್​ಲಾಕ್​ 4.0 ಜಾರಿಯಾಗಿತ್ತು. ನೈಟ್​ ಕರ್ಫ್ಯೂವನ್ನು 1 ಗಂಟೆ ಕಡಿತಗೊಳಿಸಲಾಗಿತ್ತು. ಜೊತೆಗೆ ಸಿನಿಮಾ ಥಿಯೇಟರ್​​ಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights