ಜಯಮ್ಮನನ್ನು ನೆನೆದು ಭಾವುಕರಾದ ನವರಸನಾಯಕ ಜಗ್ಗೇಶ್..!
ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಅವರ ಅಗಲಿಕೆಗೆ ಇಡೀ ಚಿತ್ರರಂಗವೇ ಕಂಬನಿ ಮಿಡಿದೆ. ನವರಸನಾಯಕ ಜಗ್ಗೇಶ್ ಕೂಡ ಜಯಂತಿ ಅವರನ್ನು ನೆನೆದು ಅವರ ಅಗಲಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಜಯಮ್ಮನ ಮನಸ್ಸು ಮಗುವಿನಂತೆ ಕೆಲವೊಮ್ಮೆ ನನ್ನ ನಟನೆ ನೋಡಿ ಮಗುವಿನಂತೆ ನಗುತ್ತಿದ್ದರು. ಹೋದ ಹಿರಿಯ ನಟರಲ್ಲಿ ಜಯಮ್ಮ ಸೇರಿಬಿಟ್ಟರು. ನಿಮ್ಮ ಆತ್ಮ ಶಾರದೆಯಲ್ಲಿ ಲೀನವಾಗಲಿ. ಲವ್ ಯೂ ಅಮ್ಮಾ ಎಂದು ಟ್ವೀಟ್ ಮಾಡುವ ಮೂಲಕ ಭಾವುಕರಾಗಿದ್ದಾರೆ.
“ನನ್ನ ಬಾಲ್ಯದಿಂದ ನಾನು ತುಂಬಾ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ.. ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ.. ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯಕಳೆವ ಅವಕಾಶ ಸಿಕ್ಕಿತು ಆಗ ನನ್ನ ಸಿನಿಮ ಪಯಣ ಅವರ ಜೊತೆ ಹಂಚಿಕೊಂಡ ಸಮಯ ಮರೆಯಲಾಗದ ಕ್ಷಣ. ಅವರಿಗೆ ನಾನು ರೇಗಿಸಿದ್ದು ಜಯಮ್ಮ ದೊರದ ಬೆಟ್ಟ ಚಿತ್ರದಲ್ಲಿ ನಿಮ್ಮ ನೋಡಿ ಈಗ ಅನ್ನಿಸುತ್ತದೆ ಅಯ್ಯೋ ದೇವರೆ ಇಂದು ನಾಯಕನಟ ಆಗುವ ಬದಲು ದೂರದ ಬೆಟ್ಟದ ಸಮಯ ಆಗಿದ್ದರೆ ಎಂಥ ಅದ್ಭುತ ಇರುತ್ತಿತ್ತು ಎಂದಾಗ ನಾಚಿ ನೀರಾಗಿದ್ದರು ಹಾಗು ಕೋಲು ಹಿಡಿದು ಅಟ್ಟಾಡಿಸಿ ನಕ್ಕು ಆನಂದಿಸಿ you are my favorite actor ಎಂದು ಮುತ್ತಿಕ್ಕಿದ್ದರು! ಕೆಲವೊಮ್ಮೆ ನನ್ನ ಹಾಸ್ಯಕಂಡು ಮಗುವಂತೆ ನಗುತ್ತಿದ್ದರು! ಮನಸ್ಸು ಮಗುವಂತೆ ನಡೆದಸಂಗತಿ ಮೆಲುಕಾಕಿ ಆನಂದಿಸುತ್ತದೆ! ಇಂದು ಆ ಮಹಾನಟಿ ಇಲ್ಲಾ ಎಂದಾಗ ಮನಸ್ಸಿಗೆ ನೋವಾಯಿತು! ಹೋದ ಅನೇಕ ಹಿರಿನಟರ ಸಾಲಿಗೆ ಜಯಮ್ಮ ಸೇರಿಬಿಟ್ಟರು! ನಿಮ್ಮಆತ್ಮ ಶಾರದೆಯಲ್ಲಿ ಲೀನವಾಗಲಿ! loveyou ಅಮ್ಮ. ಎಂದು ಟ್ವೀಟ್ ಮಾಡಿದ್ದಾರೆ.
ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ..
ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ..
ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯಕಳೆವ
ಅವಕಾಶಸ pic.twitter.com/oWIi2kkBEa— ನವರಸನಾಯಕ ಜಗ್ಗೇಶ್ (@Jaggesh2) July 26, 2021
ಬನಶಂಕರಿ ಚಿತಾಗಾರದಲ್ಲಿ ಸೋಮವಾರ (ಜು.26) ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ಸಂಜೆ 5 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನರೆವೇರಲಿದೆ. ಜಯಂತಿ ನಿಧನಕ್ಕೆ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೇಣುಕಾಚಾರ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.