ಮುಂದಿನ ಸಿಎಂ ಸ್ಥಾನಕ್ಕಾಗಿ ಐವರ ಮೇಲೆ ಹೈಕಮಾಂಡ್ ಕಣ್ಣು..!
ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಯಾಗಿದೆ. ಸದ್ಯ ರಾಜ್ಯದಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಕುತೂಹಲ ಮೂಡಿದೆ. ಇನ್ನೂ ಸಿಎಂ ಸ್ಥಾನಕ್ಕಾಗಿ ನಾಯಕರು ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್ ಕೂಡ ಸಿಎಂ ಆಯ್ಕೆ ವಿಚಾರದಲ್ಲಿ ತಲೆ ಕೆಡಿಸಿಕೊಂಡಿದೆ. ಹೀಗಿರುವಾಗ ಬಿಜೆಪಿ ಹಿರಿಯರ ಗಮನ ಐದು ನಾಯಕರ ಮೇಲಿದೆ ಎನ್ನಲಾಗುತ್ತಿದೆ.
ಹೌದು… ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್, ಬಸವರಾಜ್ ಬೊಮ್ಮಾಯಿ ಹಾಗೂ ಸಿಟಿ ರವಿ ಈ ಐವರ ಮೇಲೆ ಹೈಕಮಾಂಡ್ ಕಣ್ಣಿದೆ ಎನ್ನಲಾಗುತ್ತಿದೆ. ಎಲ್ಲಾ ಲೆಕ್ಕಾಚಾರ ನಡೆಸಿ ಯಾರು ಮುಂದಿನ ಸಿಎಂ ಆದರೆ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ಒಳ್ಳೆದು ಎನ್ನುವ ಬಗ್ಗೆ ಯೋಚಿಸಿ ಹೈಕಮಾಂಡ್ ಸಿಎಂ ಆಯ್ಕೆ ಮಾಡಲಿದೆ ಎನ್ನಲಾಗುತ್ತಿದೆ.
ಈ ನಡುವೆ ಬಿಜೆಪಿ ಮೂಲಗಳು ಬಿ.ಎಲ್.ಸಂತೋಷ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡುವ ಬಗ್ಗೆ ಹೈಕಮಾಂಡ್’ಗೆ ಹೆಚ್ಚಿನ ಒಲವಿದ್ದು, ಈ ಕುರಿತು ಮಂಗಳವಾರ ಅಥವಾ ಬುಧವಾರ ಅಧಿಕೃತ ಮಾಹಿತಿಗಳು ಲಭ್ಯವಾಗಲಿದೆ ಎಂದು ತಿಳಿಸಿವೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಮುಂದಿನ ಯಾರಾಗುತ್ತಾರೆನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.