ಜೆಡಿಎಸ್‌ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್‌ಗೆ ಸೇರ್ಪಡೆ!

ಜೆಡಿಎಸ್‌ ತೊರೆದಿದ್ದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶುಕ್ರವಾರ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಿಎಂ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ಮತ್ತು ಹಲವರು ಕಾಂಗ್ರೆಸ್‌ಗೆ ಸೇರಿದ್ದಾರೆ. ಕಾಂಗ್ರೆಸ್‌ ನಾಯಕರು ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣಾ ನಂತರ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದರು. ಕೆಲವು ದಿನಗಳ ದಿನಗಳ ಹಿಂದೆ ಅವರು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದರು. ಇದೀಗ ಪಕ್ಷಕ್ಕೆ ಸೇರಿದ್ದಾರೆ.

ಹುಬ್ಬಳ್ಳಿಯಲ್ಲಿ ಅಧಿಕೃತವಾಗಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುತ್ತಿದ್ದಂತೆ ತವರು ಕ್ಷೇತ್ರ ಸೊರಬದಲ್ಲಿ ಅಭಿಮಾನಿಗಳು, ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ- ಹಾಲು ಹಂಚಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಸಿಎಂ ಅಶೋಕ್ ಗೆಹ್ಲೋಟ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights