ರಾಜ್ಯ ಸಚಿವ ಸಂಪುಟ: ಈಶ್ವರಪ್ಪಗೆ RDPR; ಅರಗ ಜ್ಞಾನೇಂದ್ರಗೆ ಗೃಹ ಖಾತೆ!
ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟಕ್ಕೆ ಹಲವಾರು ಸಚಿವರು ಕಳೆದ ಮೂರು ದಿನಗಳ ಹಿಂದೆ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ, ಇಂದು (ಶುಕ್ರವಾರ) ನೂತನ ಸಚಿವರಿಗೆ ಖಾತೆಗಳನ್ನು ಹಂಚಲಾಗುತ್ತಿದ್ದು, ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಖಾತೆ ನೀಡಲಾಗಿದೆ.
ಅಲ್ಲದೆ, ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ, ನೂತನ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಗೃಹ ಇಲಾಖೆಯ ಹೊಣೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಉಳಿದ ಸಚಿವರಿಗೆ ಯಾವ ಖಾತೆ ನೀಡಲಾಗಿದೆ ಎಂಬುದನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವುದು,, ನಿರೀಕ್ಷಿಸಿ