ಮೇಕೆದಾಟು: ತಮಿಳುನಾಡು ಪರ ರಾಜ್ಯದ BJP ಶಾಸಕ; ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!
ಮೇಕೆದಾಟು ಯೋಜನೆಯ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ತಿಕ್ಕಾಟ ನಡೆಯುತ್ತಿದೆ. ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣ ಮಾಡಲು ಮುಂದಾಗಿರುವ ಕರ್ನಾಟಕ ಸರ್ಕಾರದ ವಿರುದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪ್ರತಿಭಟನೆ ನಡೆಸುತ್ತಿದ್ದು, ಅವರನ್ನು ಕರ್ನಾಟಕದ ಬಿಜೆಪಿ ಶಾಸಕರೂ ಆಗಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಬೆಂಬಲಿಸಿದ್ದಾರೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಮೇಕದಾಟುವಿನಲ್ಲಿ ಜಲಾಶಯ ನಿರ್ಮಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇದನ್ನು ತೆಡೆಯುವಂತೆ ತಮಿಳುನಾಡು ಸರ್ಕಾರವು ಕೇಂದ್ರದ ಮೊರೆಹೋಗಿದೆ.
ಈ ಮಧ್ಯೆ, ಮೇಕೆದಾಟು ಯೋಜನೆಯ ವಿರುದ್ದ ಒಂದು ದಿನ ಉಪವಾಸ ಸತ್ಯಾಗ್ರಹ ಮಾಡಿದ್ದ ಅಣ್ಣಾಮಲೈ, “ಯೋಜನೆ ಜಾರಿಗೆ ಒತ್ತಡ ಹೇರದಂತೆ ಕರ್ನಾಟಕದ ಸಹೋದರ, ಸಹೋದರಿಯರಲ್ಲಿ ಮನವಿ ಮಾಡುತ್ತೇನೆ” ಎಂದು ಆಗಸ್ಟ್ 5ರಂದು ಟ್ವೀಟ್ ಮಾಡಿದ್ದರು. ಇದನ್ನು ರಾಜ್ಯದ ಬಿಜೆಪಿ ಶಾಸಕ ಸಿ.ಟಿ ರವಿ ಅವರು ರಿ-ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಮೇಕೆದಾಟು ತ್ವರಿತಗತಿಗೆ ಆಗ್ರಹಿಸಿ ಎಎಪಿಯಿಂದ ಉಪವಾಸ ಸತ್ಯಾಗ್ರಹ..!