ಬಿಜೆಪಿ ಮುಖಂಡನ ಬರ್ಬರ ಕೊಲೆ- ಕಾರು ಸಮೇತ ದೇಹ ಸುಟ್ಟ ದುಷ್ಕರ್ಮಿಗಳು..?

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಜಿಲ್ಲಾ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ್ ಪ್ರಸಾದ್ ಅವರ ದೇಹ ಕಾರು ಸಮೇತ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತೆಲಂಗಾಣ ಹೈದರಾಬಾದ್ ಮೇದಕ್ ಜಿಲ್ಲೆಯಲ್ಲಿ ಮಂಗಳವಾರ ಸುಟ್ಟ ಕಾರಿನೊಂದಿಗೆ ವಿ.ಶ್ರೀನಿವಾಸ್ ಪ್ರಸಾದ್ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಮೇದಕ್ ಜಿಲ್ಲೆಯ ಎಸ್ ಸಿ ಚಂದನಾ ದೀಪ್ತಿ ಈ ಬಗ್ಗೆ ಮಾಹಿತಿ ನಿಡಿದ್ದು, ದುಷ್ಕರ್ಮಿಗಳು ವಿ.ಶ್ರೀನಿವಾಸ್ ಪ್ರಸಾದ್ ಅವರ ಕಾರಿಗೆ ಬೆಂಕಿ ಹಾಕಿದ್ದಾರೆ. ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿ ಅಲ್ಲಿಗೆ ಹೋದಾಗ, ಅದರ ಟ್ರಂಕ್ ಮೇಲೆ ಶ್ರೀನಿವಾಸ್ ಮೃತದೇಹ ಕೂಡ ಇತ್ತು ಎಂದು ತಿಳಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಶೀಘ್ರವೇ ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights