‘ಅವಕಾಶ ಸಿಕ್ಕರೆ ಕಲಾಪದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ’ ಹೆಚ್.ಡಿ.ದೇವೇಗೌಡ!

‘ಮೊದಲ ಬಾರಿಗೆ 12 ಮಹಿಳೆಯರಿಗೆ, 8 ಎಸ್ಸಿ, 12 ಎಸ್ಟಿ ಸಮುದಾಯದ ನಾಯಕರಿಗೆ ಮೋದಿ ಅವರು ತಮ್ಮ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯವೋ, ಚುನಾವಣೆ ತಂತ್ರವೋ ಗೊತ್ತಿಲ್ಲ ಆದರೆ ಅದು ಏನೇ ಇದ್ದಾರು ಮೋದಿಯವರ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ’ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ಧಾರೆ.

ನವ ದೆಹಲಿಯಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಸುದ್ದಿಘೋಷ್ಠಿ ಮಾತನಾಡಿದ, ‘ಈ ಬಾರಿ ಅಧಿವೇಶದಲ್ಲಿ ನಾನು ಒಂದು ದಿನವೂ ಗೈರು ಆಗಿಲ್ಲ ಎಲ್ಲಾ ದಿನದ ಕಲಾಪಗಳಲ್ಲಿ ಭಾಗಿಯಾಗಿದ್ದೇನೆ. ಕಲಾಪದಲ್ಲಿ ಯಾವುದೇ ರೈತರ ಸಮಸ್ಯೆಗಳು ಚರ್ಚೆಯಾಗಿಲ್ಲ. ಚರ್ಚೆ ಮಾಡಲು ನಮ್ಮ ವಿರೋಧ ಪಕ್ಷಗಳು ಹಾಗು ಆಡಳಿತ ಪಕ್ಷಗಳು ಅವಕಾಶ ಮಾಡಿಕೊಟ್ಟಿಲ್ಲ’ ಎಂದಿದ್ದಾರೆ.

‘ಈ ಬಗ್ಗೆ ಎಲ್ಲಾ ಪಕ್ಷಗಳ ನಾಯಕರು ಒಟ್ಟಿಗೆ ಸೇರಿ ಚರ್ಚೆ ನಡೆಸಬೇಕು. ಮುಂದಿನ ಅಧಿವೇಶನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ರಾಜ್ಯಸಭೆಯಲ್ಲಿ ಮಾತನಾಡುವ ಅವಕಾಶ ನನಗೆ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಸಮಯ ಸಿಗಬಹದು ಎಂದುಕೊಂಡಿದ್ದೇನೆ. ಅವಕಾಶ ಸಿಕ್ಕರೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ’.

‘ಸಿಎಂ ಬೊಮ್ಮಾಯಿ ಅವರು ಭೇಟಿಯಾದ ನಂತರ ಪ್ರೀತಮ್ ಗೌಡ ಅಸಮಧಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅಷ್ಟು ಕೆಳಮಟ್ಟಕ್ಕೆ ನನನ್ನು ಇಳಿಸಬೇಡಿ. ನೀವು ಕೂಡ ಈ ಬಗ್ಗೆ ನನ್ನ ಮತ್ತೆ ಮತ್ತೆ ಪ್ರಶ್ನೆ ಮಾಡಬೇಡಿ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಬಿಜೆಪಿ ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಚರ್ಚೆ ಮಾಡಲ್ಲ. ಯಡಿಯೂರಪ್ಪ ಮಾರ್ಗದರ್ಶನದಿಂದ ಬೊಮ್ಮಾಯಿ ನಿರ್ಧಾರ ಮಾಡುತ್ತಾರೆ. ಗೊಂದಲಗಳನ್ನು ನಿಭಾಯಿಸಲು ಬೊಮ್ಮಾಯಿ ಸಮರ್ಥರಿದ್ದಾರೆ ಎಂದು ಕೊಂಡಿದ್ದೇನೆ. ಸಿನೀಯರ್ ಬೊಮ್ಮಾಯಿ ನಾನು ಉತ್ತಮ ಗೆಳೆಯರು ‘ ಎಂದರು.

‘ಸಿಎಂ ಬೊಮ್ಮಾಯಿ ಅವರು ನನ್ನ ಮನೆಗೆ ಬಂದಿದ್ದರು. ನನ್ನಿಂದ ಸರಕಾರಕ್ಕೆ ಏನೂ ತೊಂದರೆ ಆಗಲ್ಲ. ನೆಲ, ಜಲ, ಭಾಷೆ ವಿಚಾರವಾಗಿ ಸಹಕಾರ ನೀಡುತ್ತೇವೆ. ಜೊತೆಗೆ ರಾಜ್ಯದ ಜನತೆ ಅಭಿವೃದ್ಧಿ ವಿಚಾರವಾಗಿ ನಮ್ಮ ಪಕ್ಷ ಎಲ್ಲದಕ್ಕೂ ಸಿದ್ದ’ ಎಂದು ಹೇಳಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights