ಮುಖ್ಯಮಂತ್ರಿಗೆ ಝೀರೋ ಟ್ರಾಫಿಕ್‌ ವ್ಯವಸ್ಥೆ ರದ್ದು; ಬೊಮ್ಮಾಯಿ ಮಹತ್ವದ ನಿರ್ಧಾರ!

ಮುಖ್ಯಮಂತ್ರಿ ಪ್ರಯಾಣದ ವೇಳೆ ಅವರು ಪ್ರಯಾಣಿಸುವ ಮಾರ್ಗಗಳಲ್ಲಿ ನೀಡಲಾಗುತ್ತಿದ್ದ ಝೀರೋ ಟ್ರಾಫಿಕ್‌ ವ್ಯವಸ್ಥೆಯನ್ನು ರದ್ದು ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಗೃಹ ಮಂತ್ರಿ ಅಗರ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್‌ ಬೇಡ ಎಂದು ಹೇಳಿದ ನಂತರ, ಸಿಎಂ ಬೊಮ್ಮಾಯಿ ಕೂಡ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

ಬೆಂಗಳೂರಿನಲ್ಲಿ ತಾವು ಪ್ರಯಾಣಿಸುವಾಗ ನೀಡಲಾಗುವ ‘ಝೀರೊ ಟ್ರಾಫಿಕ್‌’ ವ್ಯವಸ್ಥೆಯಿಂದ ಸಾಕಷ್ಟ ಟ್ರಾಫಿಕ್‌ ಜಾಮ್‌ ಆಗುತ್ತದೆ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತದೆ. ಅಲ್ಲದೆ, ಆಂಬುಲೆನ್ಸ್‌ಗಳು ಹಾಗೂ ಅಗ್ನಿಶಾಮಕ ವಾಹನಗಳೂ ಟ್ರಾಫಿಕ್‌ನಲ್ಲಿ ಸಿಲುಸಿಕೊಳ್ಳುತ್ತವೆ. ಇದು ಅಪಾರ ನೋವನ್ನು ಉಂಟು ಮಾಡುತ್ತದೆ. ಹಾಗಾಗಿ ತಮಗೆ ನೀಡಲಾಗುವ ಝೀರೋ ಟ್ರಾಫಿಕ್‌ ವ್ಯವಸ್ಥೆಯನ್ನು ರದ್ದುಮಾಡಬೇಕು. ಸಿಗ್ನಲ್‌ಗಳಲ್ಲಿ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಬೊಮ್ಮಾಯಿ ಅವರು ಪೊಲೀಸ್‌ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಅವರ ಸೂಚನೆಯ ಬಳಿಕ, ಮುಖ್ಯಮಂತ್ರಿ ಪ್ರಯಾಣ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ರದ್ದುಪಡಿಸಲಾಗಿದೆ. ಒಂದು ಜಂಕ್ಷನ್‌ನಿಂದ ಇನ್ನೊಂದು ಜಂಕ್ಷನ್‌ಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಝೀರೊ ಟ್ರಾಫಿಕ್‌ ಸಂಚಾರ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಬೆಂಗಳೂರು ನಗರ ಜಂಟಿ ಪೊಲೀಸ್‌ ಆಯುಕ್ತ ಬಿ.ಆರ್‌. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ: ಹೊಸ ಕೇಂದ್ರ ಸಚಿವರನ್ನು ಜನರಿಗೆ ಪರಿಚಯಿಸಲು ರಾಜ್ಯದಲ್ಲಿ ಬಿಜೆಪಿ ಪ್ರವಾಸ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights