ಮೈಸೂರು ಪಾಲಿಕೆಯಲ್ಲಿ ‘ಸೂರು’ ಪಡೆದ ಕಮಲ : ಸಿಎಂ ಬೊಮ್ಮಾಯಿ ಅಭಿನಂದನೆ!
ಮೈಸೂರು ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಮೇಯರ್ ಪಟ್ಟ ಬಿಜೆಪಿಗೆ ಲಭಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಒಳ ಜಗಳದ ಲಾಭ ಪಡೆದುಕೊಂಡ ಬಿಜೆಪಿ ಮೇಯರ್ ಸ್ಥಾನವನ್ನು ಅಲಂಕರಿಸಿದೆ.
ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮೈಸೂರು ಪಾಲಿಕೆ ನೂತನ ಮೇಯರ್ ಸುನಂದಾ ಪಾಲನೇತ್ರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೊದಲ ಬಾರಿ ಮೇಯರ್ ಪಟ್ಟ ಅಲಂಕರಿಸುತ್ತಿದೆ.
ಈ ಬಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮುರಿದು ಬಿದ್ದ ಹಿನ್ನೆಲೆಯಲ್ಲಿ 26 ಮತಗಳನ್ನು ಗಳಿಸಿದ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾದರು. ಜೆಡಿಎಸ್ ಸದಸ್ಯರ ವಿರುದ್ಧ ಧಿಕ್ಕಾರ, ಆಕ್ರೋಶ ಹೊರಹಾಕಿ ಕಾಂಗ್ರೆಸ್ ಸದಸ್ಯರು ವಾಕ್ ಔಟ್ ಮಾಡಿದರು. ಇಂದು ಚುನಾವಣೆ ನಡೆದ ವೇಳೆ ಪಾಲಿಕೆಯಲ್ಲಿ ತೀವ್ರ ಹೈಡ್ರಾಮಾ ನಡೆಯಿತು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಗದೇ ಇರುವುದರಿಂದ ಬಿಜೆಪಿ ಅಧಿಕಾರ ಪಡೆದುಕೊಂಡಿದೆ.
BJP wrest power for the first time in @mysurucitycorp. Sunanda Palanetra elected as new Mayor of #Mysuru.@INCKarnataka corporators walk out of council raising slogans against @JanataDal_S for putting an end to alliance. @XpressBengaluru @santwana99 @ShivascribeTNIE pic.twitter.com/xqcsLvuhwf
— Karthik K K (@Karthiknayaka) August 25, 2021
ಸುದ್ದಿಗಾರರ ಮುಂದೆ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿರುವ ಸುನಂದಾ ಸಂತಸ ಹಂಚಿಕೊಂಡಿದ್ದಾರೆ. ಮೇಯರ್ ಆಗಿದ್ದಕ್ಕೆ ತುಂಬಾ ಖುಷಿಯಾಗುತ್ತಿದೆ. ತುಂಬಾ ದಿನಗಳ ಬಳಿಕ ಬಿಜೆಪಿಗೆ ಅಧಿಕಾರ ಸಿಕ್ಕಿದೆ. ಕಳೆದ ಬಾರಿಯೇ ನಾನು ಮೇಯರ್ ಆಗಬೇಕಿತ್ತು, ಈಗ ಸಿಕ್ಕಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮೈಸೂರು ಮೇಯರ್ ಸುನಂದಾ ಪಾಲನೇತ್ರ ತಿಳಿಸಿದರು.