ಸ್ಥಳೀಯ ಚುನಾವಣೆ: ಕರ್ನಾಟಕದಲ್ಲಿ ಸಣ್ಣ ಪಕ್ಷಗಳು ದೊಡ್ಡ ಹೋರಾಟಕ್ಕೆ ಸಿದ್ದವಾಗುತ್ತಿವೆ!

ಮೂರು ಪ್ರಮುಖ ಪಕ್ಷಗಳು – ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ರಾಜಕೀಯ ಕಣವಾಗಿರುವ ಕರ್ನಾಟಕದಲ್ಲಿ ಯಾವುದೇ ಆಧಾರವಿಲ್ಲದ ಸಣ್ಣ ಪಕ್ಷಗಳು, ಮುಂಬರುವ ಚುನಾವಣೆಯಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳಲು ಸಿದ್ದತೆ ನಡೆಸುತ್ತಿವೆ.

ಸೆಪ್ಟೆಂಬರ್‌ ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಆರಂಭವಾಗಿವೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ. ಅಲ್ಲಿಂದ ಬೆಂಗಳೂರಿನ ಬಿಬಿಎಂಪಿ ಚುನಾವಣೆಯವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಬಿಬಿಎಂಪಿಗೆ ವರ್ಷಾಂತ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಮೊದಲ ಬಾರಿಗೆ, ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಸ್ಥಳದ ಐತಿಹಾಸಿಕ ಮಹತ್ವವನ್ನು ಎತ್ತಿ ತೋರಿಸುವ ಮೂಲಕ ವಿಶ್ವ ದರ್ಜೆಯ ನಗರಗಳ ನಿರ್ಮಾಣದ ಭರವಸೆಯನ್ನು ಹೊಂದಿದ್ದೇವೆ. ಮಹಿಳೆಯರು ಮತ್ತು ಯುವಕರ ಮತಗಳನ್ನು ಪಡೆಯಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರಬಹುದು, ಆದರೆ ನಾವು ಎಲ್ಲರನ್ನೂ ಒಳಗೊಳ್ಳುವ ರಾಜಕೀಯಕ್ಕಾಗಿ ಕಣಕ್ಕಿಳಿಯಲಿದ್ದೇವೆ ಎಂದು ಎಎಪಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತದ 363 ಸಂಸದರು – ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್‌: ಎಡಿಆರ್

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಕೂಡ ತನ್ನ ಅಭ್ಯರ್ಥಿಗಳನ್ನು ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆಗಳ ಎಂಟು ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. “ನಾವು ಪಕ್ಷದ ಬದ್ದತೆಯ ಕಾರ್ಯಕರ್ತರು. ಕೊಳ್ಳೇಗಾಲದ ಶಾಸಕ ಎನ್ ಮಹೇಶ್ ಅವರ ಉಚ್ಚಾಟಣೆಯಿಂದ ಪಕ್ಷವು ಶುದ್ದೀಕರಣಗೊಂಡಿದೆ. ಇದರಿಂದಾಗಿಜನರು ನಮ್ಮನ್ನು ಆರ್ಶೀವದಿಸುತ್ತಾರೆ” ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ. ಕೃಷ್ಣಮೂರ್ತಿ ಹೇಳಿದ್ದಾರೆ.

ಬಿಎಸ್‌ಪಿ ನಿರ್ದಿಷ್ಟ ಸಮುದಾಯದ ಮತಗಳ ವಿಭಜನೆ ಮಾಡುತ್ತದೆ ಎಂಬುದು ಅಪ್ರಸ್ತುತ. ಬದಲಾಗಿ, ಹಿಂದಿನ ಆಡಳಿತಗಳಲ್ಲಿ ಬಹುಜನರ (ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ) ಜೀವನವು ಹೇಗೆ ಸುಧಾರಿಸಿಲ್ಲ ಎಂಬುದನ್ನು ಬಿಎಸ್‌ಪಿ ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ. ಪಕ್ಷವು ರಾಜ್ಯದಾದ್ಯಂತ ತನ್ನ ಕಾರ್ಯಕರ್ತರಿಗಾಗಿ ಸರಣಿ ಕಾರ್ಯಾಗಾರಗಳನ್ನು ನಡೆಸುತ್ತಿದೆ ಎಂದು ವರದಿಯಾಗುತ್ತಿವೆ.

2004ರಲ್ಲಿ, ಪಕ್ಷದ ನಾಯಕಿ ಮಾಯಾವತಿ ಅವರ ಪ್ರಭಾವ ಉತ್ತುಂಗದಲ್ಲಿದ್ದಾಗ, ಬಿಎಸ್‌ಪಿ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೇವಲ 2.5% ಮತಗಳನ್ನು ಗಳಿಸುವ ಮೂಲಕ, ಸುಮಾರು 45 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗಿದೆ. ಪಕ್ಷವು 2018 ರ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಲ ಕ್ಷೇತ್ರವನ್ನು ಗೆಲ್ಲುವ ಮೂಲಕ ತನ್ನ ಮೊದಲ ಗೆಲುವನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

ಏತನ್ಮಧ್ಯೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ), ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಾಲೆ ಅವರು ಎಂ ವೆಂಕಟಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ತಮ್ಮ ಕಾರ್ಯಕರ್ತರನ್ನು  ಸಂಘಟಿಸುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶವು ಬಿಬಿಎಂಪಿ ಚುನಾವಣೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಗಳಿಗೆ ಮೆಟ್ಟಿಲಾಗಲಿವೆ. ಅಲ್ಲದೆ, ಈ ಸಣ್ಣ ಪಕ್ಷಗಳು ಯಾರ ಭವಿಷ್ಯವನ್ನು ಕಸಿದುಕೊಳ್ಳುತ್ತವೆ ಎಂಬುದರ ಬಗ್ಗೆ ಸುಳಿವು ನೀಡಬಹುದು.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು: ಅಮರಿಂದರ್‌ರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಲು ಶಾಸಕರ ಒತ್ತಾಯ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights