ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ಪ್ರಕರಣ : ಕೇಂದ್ರ ಸಚಿವ ನಾರಾಯಣ ರಾಣೆಗೆ ಜಾಮೀನು!
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ಜಾಮೀನು ನೀಡಲಾಗಿದೆ.
ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ಜಾಮೀನು ಸಿಕ್ಕಿದೆ. ಜುಲೈನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವರಾಗಿ ಸೇರ್ಪಡೆಯಾದ ಬಿಜೆಪಿ ನಾಯಕರಾದ ರಾಣೆ, 20 ವರ್ಷಗಳಲ್ಲಿ ಬಂಧನಕ್ಕೊಳಗಾದ ಮೊದಲ ಕೇಂದ್ರ ಸಚಿವರಾಗಿದ್ದಾರೆ.
ಕೇಂದ್ರ ಸಚಿವರ ವಕೀಲರು ಮಾತನಾಡಿ, ರಾಣೆ ಅವರು ಆಗಸ್ಟ್ 31 ಮತ್ತು ಸೆಪ್ಟೆಂಬರ್ 13 ರಂದು ಪೊಲೀಸರ ಮುಂದೆ ಹಾಜರಾಗಬೇಕಾಗುತ್ತದೆ ಎಂದು ಹೇಳಿದರು. ಪೊಲೀಸ್ ತನಿಖೆಗೆ ಅವರ ಧ್ವನಿ ಮಾದರಿ ಅಗತ್ಯವಿದ್ದರೆ, ಏಳು ದಿನಗಳ ಮುಂಚಿತವಾಗಿ ನೋಟಿಸ್ ನೀಡಲಾಗುವುದು. ಭವಿಷ್ಯದಲ್ಲಿ ಅಂತಹ ಕೆಲಸ ಮಾಡದಂತೆ ಅವರಿಗೆ ಹೇಳಲಾಗಿದೆ ಎಂದು ವಕೀಲರು ಹೇಳಿದರು.
ಸಚಿವ ನಾರಾಯಣ ರಾಣೆ ಹೇಳಿದ್ದೇನು..?