70 ಲಕ್ಷ ಲಂಚಕ್ಕೆ ಬೇಡಿಕೆ; ಕಂದಾಯ ಇಲಾಖೆ ಉನ್ನತಾಧಿಕಾರಿ ಬಂಧನ!

ಜಮೀನಿಗೆ ಬೌಂಡರಿ ಲೈನ್ ಫಿಕ್ಸ್ ಮಾಡಿಕೊಡುವ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ಇಲಾಖೆ ಉನ್ನತಾಧಿಕಾರಿ ಹಾಗೂ ಆತನ ಸಹಾಯಕ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಕಂದಾಯ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಆನಂದ್ ಹಾಗೂ ಸಹಾಯಕ ರಮೇಶ್ ಎಂಬುವವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಏರ್​ಪೋರ್ಟ್​​ಗೆ ಹತ್ತಿರವಿರುವ ಯಲಹಂಕ ತಾಲ್ಲೂಕಿನ ಕುದುರುಗೆರೆಯ ಜಮೀನು ಸರ್ವೆ ನಂ. 145, 146 ಸಂಬಂಧ ಲಂಚ ಪ್ರಕರಣ ದಾಖಲಾಗಿದ್ದು, ಈ ಜಮೀನಿನ ಬೌಂಡರಿ ಫಿಕ್ಸ್ ಮಾಡಲು 70 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಲಾಗಿತ್ತು ಎಂದು ತಿಳಿದು ಬಂದಿದೆ.

ಆನಂದ್‌ ಅವರು ಅಡ್ವಾನ್ಸ್ ಆಗಿ 20 ಲಕ್ಷ ಹಣ ಪಡೆದುಕೊಂಡಿದ್ದು, ಉಳಿದ ಹಣಕ್ಕಾಗಿ ಚೆಕ್ ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ಲಂಚಪ್ರಕರಣ ಸಂಬಂಧ ಎಸಿಬಿ ಅಧಿಕಾರಿಗಳು ಆನಂದ್ ಅವರ ಜಾಲಹಳ್ಳಿ ಮನೆ, DDLR ಕುಸುಮ ಲತಾ ಮನೆ ಮತ್ತು ಸರ್ವೆ ಅಧಿಕಾರಿ ಶ್ರೀನಿವಾಸ್ ಅವರ ತುಮಕೂರಿನ ಮನೆ ಸೇರಿ ಮೂರು ಕಡೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ: ಮಕ್ಕಳ ಸ್ವೆಟರ್‌ನಲ್ಲೂ ಹಗರಣ ಮಾಡುತ್ತಿದೆ: ಡಿಕೆ ಶಿವಕುಮಾರ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights