ಬಾಳೆ ಹಣ್ಣು ಮಾರಲು ಬಂದು ಯುವತಿಯ ಬಾಳೇ ಹಾಳು ಮಾಡಿದ ಕಾಮುಕರು!
ಪ್ರೀತಿಸಿದ ಹುಡುಗಿಯನ್ನು ಮದುಮೆ ಮಾಡಿಕೊಡದ ಹುಡುಗಿ ತಂದೆಯನ್ನೇ ಕೊಲೆ ಮಾಡಿದ ಆರೋಪಿ ಮೈಸೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಆರೋಪಿಯೂ ಆಗಿದ್ದಾನೆ ಎನ್ನಲಾಗುತ್ತಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್ 24 ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ದೊಡ್ಡ ಸಾಹಸವನ್ನೇ ಮಾಡಿದ್ದಾರೆ. ಮೈಸೂರು ಪೊಲೀಸರು ಗ್ಯಾಂಗ್ರೇಪ್ ಪ್ರಕರಣದ 6 ಆರೋಪಿಗಳ ಪೈಕಿ 5 ಮಂದಿಯನ್ನು ತಮಿಳುನಾಡಲ್ಲಿ ವಶಕ್ಕೆ ತೆಗೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಈ ಕುಕೃತ್ಯ ನಡೆಸಿರಬಹುದು ಎನ್ನಲಾಗಿತ್ತು. ಆದರೆ ಬಂಧಿತ ಐವರ ಪೈಕಿ ಯಾರೂ ವಿದ್ಯಾರ್ಥಿಗಳಲ್ಲ ಎನ್ನುವ ಬಗ್ಗೆ ಮಾಹಿತಿ ಈಗ ಲಭ್ಯವಾಗಿದೆ.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣದಲ್ಲಿ ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದ 5 ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಕಾರ್ಯಾಚರಣೆ ಸಕ್ಸಸ್ ಆಗಿದೆ ಎಂದು ಹೇಳಿದ್ದಾರೆ. ಇನ್ನೆರಡು ಗಂಟೆಯಲ್ಲಿ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡುತ್ತೇವೆ. ಪೊಲೀಸರು ಅಥವಾ ನಾನೇ ಅಧಿಕೃತ ಮಾಹಿತಿ ನೀಡುವೆ ಎಂದೂ ಹೇಳಿದ್ದಾರೆ.