ರಾಜಸ್ಥಾನದಲ್ಲಿ ಭೀಕರ ಅಪಘಾತ : 11 ಮಂದಿ ಸಾವು – ಏಳು ಜನರ ಸ್ಥಿತಿ ಗಂಭೀರ!
ರಾಜಸ್ಥಾನದ ನಾಗೌರ್ ನಲ್ಲಿ ಕ್ರೂಸರ್ ಟ್ರಕ್ ಗೆ ಡಿಕ್ಕಿ ಹೊಡೆದು 11 ಮಂದಿ ಸಾವನ್ನಪ್ಪಿದ್ದು ಏಳು ಜನರ ಸ್ಥಿತಿ ಗಂಭೀರವಾಗಿದೆ.
ರಾಜಸ್ಥಾನದಲ್ಲಿ ಮಂಗಳವಾರ ಮುಂಜಾನೆ ಈ ಭೀಕರ ಅಫಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಏಳು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಶ್ರೀ ಬಾಲಾಜಿ ಪೊಲೀಸ್ ಠಾಣೆ ಎಸ್ಎಚ್ಒ, ಗಾಯಗೊಂಡವರನ್ನು ಬಿಕಾನೇರ್ ನ ನೋಖಾದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.
ಅಪಘಾತದಲ್ಲಿ ಜೀವಹಾನಿಯಾದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನದ ನಾಗೌರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತ ಅತ್ಯಂತ ನೋವಿನ ಸಂಗತಿ ಎಂದು ಟ್ವೀಟ್ ಮಾಡಿದ್ದಾರೆ.
राजस्थान के नागौर में हुआ भीषण सड़क हादसा अत्यंत दुखद है। जिन लोगों को इस दुर्घटना में जान गंवानी पड़ी है, मैं उन सभी के परिजनों के प्रति अपनी संवेदना व्यक्त करता हूं। साथ ही घायलों के जल्द स्वस्थ होने की कामना करता हूं: PM @narendramodi
— PMO India (@PMOIndia) August 31, 2021
“ರಾಜಸ್ಥಾನದ ನಾಗೌರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತ ತುಂಬಾ ನೋವಿನಿಂದ ಕೂಡಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ಬರೆದಿದ್ದಾರೆ.
ಇನ್ನೂ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನಾಗೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಉಜ್ಜೈನಿಯ 11 ಜನರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.