ಯಾವುದೇ ಆತುರವಿಲ್ಲ; ವಿಧಾನಸಭೆಗೆ ಹೋಗಲು 2023 ರವರೆಗೆ ಕಾಯುತ್ತೇನೆ: ಬಿವೈ ವಿಜಯೇಂದ್ರ

ಸಿಂದಗಿ ಅಥವಾ ಹಾನಗಲ್‌ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ-ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಇಂತಹ ಊಹಾಪೋಹಗಳಿಗೆ ತೆರೆ ಎಳೆದಿರುವ ವಿಜಯೇಂದ್ರ, ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. 2023 ವಿಧಾನಸಭಾ ಚುನಾವಣೆಗೆ ಕಾಯುತ್ತೇನೆ ಎಂದು ಹೇಳಿದ್ದಾರೆ.

ಜೆಡಿಎಸ್ ಶಾಸಕ ಎಂಸಿ ಮನಗೂಳಿ ಮತ್ತು ಸಿಎಂ ಉದಾಸಿ ಅವರ ಸಾವಿನ ನಂತರ ಸಿಂದಗಿ ಮತ್ತು ಹಾನಗಲ್‌ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.  2023 ವಿಧಾನಸಭಾ ಚುನಾವಣೆಗೆ ಕೇವಲ 19 ತಿಂಗಳು ಬಾಕಿಯಿವೆ. ಹೀಗಾಗಿ ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

“ನಾನು ಈಗ ತರಾತುರಿಯಲ್ಲಿ ಸ್ಪರ್ಧಿಸಿದರೆ, ನಾನು 2023 ರಲ್ಲಿ ನನ್ನ ಕ್ಷೇತ್ರವನ್ನು ಬದಲಾಯಿಸಬೇಕಾಗಬಹುದು. ನನ್ನ ಬೆಂಬಲಿಗರು ಶಾರ್ಟ್‌ಲಿಸ್ಟ್ ಮಾಡುವ ಕ್ಷೇತ್ರದಿಂದ 2023ರ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ. ಅಲ್ಲಿಯವರೆಗೆ ಕಾಯುತ್ತೇನೆ” ಎಂದು ವಿಜಯೇಂದ್ರ ಹೇಳಿರುವುದಾಗಿ TNIE ವರದಿ ಮಾಡಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ 2022: ಕಾಂಗ್ರೆಸ್‌ಗೆ ಬಿಗ್‌ಶಾಕ್‌; ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೇ ಅಧಿಕಾರ!

ಯಡಿಯೂರಪ್ಪ ಮತ್ತು ತಮ್ಮ ಸಹೋದರನಾಗಿರುವ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಮತ್ತು ಬೆಂಬಲಿಗರೊಂದಿಗೆ ಚರ್ಚೆ ನಡೆಸಿ, ಚುನಾವಣೆಗೆ ಆರು ತಿಂಗಳ ಮುಂಚೆ ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

“ಕಳೆದ ಬಾರಿ, ನಾನು ವರುಣಾದಿಂದ ಸ್ಪರ್ಧಿಸಲು ಬಯಸಿದ್ದೆ… ಆದರೆ, ಪಕ್ಷ ಬೇಡ ಎಂದು ಹೇಳಿತು. ಈ ಬಾರಿ ನನಗೆ ಅಂತಹ ಹಿಂಜರಿಕೆ ಇಲ್ಲ” ಎಂದು ಅವರು ಹೇಳಿದ್ದಾರೆ.

ವಿಜಯೇಂದ್ರ ಅವರನ್ನು ಮತ್ತಷ್ಟು ಮುನ್ನೆಲೆಗೆ ತರಲು ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ.

“ಬೊಮ್ಮಾಯಿ ಸಿಎಂ ಆಗಿದ್ದಾರೆ ಮತ್ತು ಅವರು ನಾಯಕರಾಗಿ ಹೊರಹೊಮ್ಮಬೇಕಾಗಿದೆ. ನಾನು ಅದರೊಂದಿಗೆ ಚೆನ್ನಾಗಿದ್ದೇನೆ. ಯಡಿಯೂರಪ್ಪನವರೂ ಕೂಡ ಬೊಮ್ಮಾಯಿ ಜೊತೆ ಕೆಲಸ ಮಾಡುತ್ತಾರೆ” ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ಸ್ಥಳೀಯ ಚುನಾವಣೆ: 231 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್‌ ಮುನ್ನಡೆ; ಬಿಜೆಪಿಗೆ 185 ಸ್ಥಾನಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights