ರಸ್ತೆ ಅಪಘಾತಕ್ಕೀಡಾದ ಮೆಗಾಸ್ಟಾರ್ ಚಿರಂಜೀವಿ ಸೋದರಳಿಯ ಸಾಯಿ ಧರಮ್ ತೇಜ್!

ಮೆಗಾಸ್ಟಾರ್ ಚಿರಂಜೀವಿ ಸೋದರಳಿಯ ನಟ ಸಾಯಿ ಧರಮ್ ತೇಜ್ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಬಳಿಕ ಸಾಯಿ ಧರಮ್ ತೇಜ್ ಅವರಿಗೆ ಎದೆ, ಹೊಟ್ಟೆ, ಬಲಗಣ್ಣಿಗೆ ತೀವ್ರವಾದ ಪೆಟ್ಟಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ವಿಷಯ ತಿಳಿಯುತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ನಟ ಪವನ್ ಕಲ್ಯಾಣ್, ಸಾಯಿ ಧರಮ್ ತೇಜ್ ಆರೋಗ್ಯದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾತನಾಡಿದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೂ ಹೆದರುವಂಥದ್ದೇನಿಲ್ಲ. ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಅಲ್ಲದೇ ನಟ ಚಿರಂಜೀವಿ ಕೂಡ ಟ್ವೀಟ್ ಮೂಲಕ ಸಾಯಿ ಧರಮ್ ಗೆ ಸಣ್ಣ ಪುಟ್ಟಗಾಯಗಳಾಗಿವೆ. ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್ ನ ದುರ್ಗಮ್ ಚೆರುವ್ ಕೇಬಲ್ ಬ್ರಿಡ್ಜ್ ಬಳಿ ಸಾಯಿ ಧರಮ್ ತೇಜ್ ಬೈಕ್ ನಲ್ಲಿ ತಡರಾತ್ರಿ ಬರುತ್ತಿದ್ದಾಗ ಸ್ಕಿಡ್ ಆಗಿ ಬೈಕ್ ಅಪಘಾತ ಸಂಭವಿಸಿತ್ತು. ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಅವರನ್ನು ತಕ್ಷಣ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ನಟ ಹೆಲ್ಮೆಟ್ ಹಾಕಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights