ಒಂದು ವೇಳೆ ಸಿದ್ದರಾಮಯ್ಯ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ: ಬಿಎಸ್ ಯಡಿಯೂರಪ್ಪ
ಮುಂಬರುವ ಚುನಾವಣೆಯಲ್ಲಿ ಒಂದು ವೇಳೆ ಸಿದ್ದರಾಮಯ್ಯ ಗೆಲುವು ಸಾಧಿಸಿದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಇಂದು ಅಧಿವೇಶನಕ್ಕೂ ಮುನ್ನ ಮಾತನಾಡಿದ ಅವರು, ಸಿಎಂ ಬಸವರಾಜಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ಅಗತ್ಯವಿರುವ ನೆರವನ್ನು ನಾನೂ ನೀಡುತ್ತೇನೆ. ಮುಂದಿನ ಚುನಾವಣೆಗಳಲ್ಲಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿಯೇ ಕೆಲಸ ಮಾಡಬೇಕು ಎಂದೇನಿಲ್ಲ. ಶಾಸಕನಾಗಿಯೂ ಕೆಲಸಗಳನ್ನು ಮಾಡುತ್ತೇನೆ. ಪಕ್ಷವನ್ನು ಮತ್ತಷ್ಟ ಬಲಗೊಳಿಸಲು ನಾನು ಮತ್ತು ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯದ್ಯಂತ ಪ್ರವಾಸ ಮಾಡುತ್ತೇವೆ. ಪಕ್ಷವನ್ನು ಬಲಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಪಕ್ಷವನ್ನು ಅಧಿಕಾರಕ್ಕೆ ತರಲು ಯತ್ನಿಸುತ್ತೇವೆ ಎಂದು ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಅಕಸ್ಮಾತ್ ಸಿದ್ದರಾಮಯ್ಯ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇವೆ ಎಂದು ಬಿಎಸ್ವೈ ಹೇಳಿದ್ದಾರೆ.
ಇದನ್ನೂ ಓದಿ: ಬೆಲೆ ಏರಿಕೆಗೆ ವಿರೋಧ: ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್!