ಬಿಜೆಪಿ-ಆರ್ಎಸ್ಎಸ್ ‘ನಕಲಿ ಹಿಂದುಗಳು’; ಅವರು ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಾರೆ: ರಾಹುಲ್ ಗಾಂಧಿ
ಬಿಜೆಪಿ ಮತ್ತು ಆರ್ಎಸ್ಎಸ್ ತಮ್ಮ ಲಾಭಕ್ಕಾಗಿ ಧರ್ಮವನ್ನು ಬಳಸುವ “ನಕಲಿ ಹಿಂದುಗಳು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಸರಿ ಪಡೆಯ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆಯ ದಿನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ನ ಸಿದ್ಧಾಂತವು ಬಿಜೆಪಿ-ಆರ್ಎಸ್ಎಸ್ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಈ ಎರಡು ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಲ್ಲದು ಎಂದು ಅವರು ಹೇಳಿದ್ದಾರೆ.
ಅವರು ಯಾವ ರೀತಿಯ ಹಿಂದುಗಳು? ಅವರು ನಕಲಿ ಹಿಂದುಗಳು. ಅವರು ಹಿಂದೂ ಧರ್ಮವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಾರೆ. ಅವರು ಧರ್ಮದ ದಲ್ಲಾಳಿಗಳು, ಆದರೆ ಅವರು ಹಿಂದುಗಳಲ್ಲ” ಎಂದು ಜೆಪಿ-ಆರ್ಎಸ್ಎಸ್ ವಿರುದ್ದ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
Read Also: ರಾಷ್ಟ್ರ ಧ್ವಜಕ್ಕೆ ಅವಮಾನ; ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲು!