ಚಿತ್ರದುರ್ಗದಲ್ಲಿ ವಿಚಿತ್ರ ರೋಗದಿಂದ ಮಕ್ಕಳ ನರಳಾಟ : ದಾಖಲಾತಿಗಾಗಿ ಆಸ್ಪತ್ರೆಯ ಮುಂದೆ ಕಾದುಕುಳಿತ ಪೋಷಕರು!

ಚಿತ್ರದುರ್ಗದ ಮಕ್ಕಳಲ್ಲಿ ವಿಚಿತ್ರ ರೋಗ ಕಾಣಿಸಿಕೊಂಡಿದ್ದು ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ.

ಕೆಮ್ಮು, ನೆಗಡಿ ಹಾಗೂ ಜ್ವರದಿಂದ ಹಸುಗೂಸುಗಳು ಸೇರಿದಂತೆ 9 ವರ್ಷದೊಳಗಿನ ಮಕ್ಕಳು ಬಳಲುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಜಿಲ್ಲಾಸ್ಪತ್ರೆ ಮಕ್ಕಳ ಆಸ್ಪತ್ರೆಯಂತಾಗಿದೆ. ಬೆಡ್ ಗಳಿಲ್ಲದೇ ಚಿಕಿತ್ಸೆಗಾಗಿ ಪರದಾಡುವಂತಾ ಸ್ಥಿತಿ ನಿರ್ಮಾಣವಾಗಿದೆ.

ಆಸ್ಪತ್ರೆಯ ವಾರ್ಡ್ ಗಳು ಭರ್ತಿಯಾಗಿರುವುದರಿಂದ ಮಕ್ಕಳನ್ನು ದಾಖಲಿಸಿಕೊಳ್ಳು ಸಿಬ್ಬಂದಿಗಳು ಹಿಂದೇಟು ಹಾಕುತ್ತಿದ್ದಾರೆ. ಕೆಲ ಮಕ್ಕಳಿಗೆ ತಾಯಿಯ ಮಡಿಲು ಹಾಗೂ ನೆಲವೇ ಆಸರೆಯಾಗಿದೆ. ತೀವ್ರ ಆಯಾಸದಿಂದ ಹಸುಗೂಸುಗಳು ನಿತ್ರಾಣಗೊಳ್ಳುತ್ತಿದ್ದು ಪೋಷಕರು ಆತಂಕಗೊಂಡಿದ್ದಾರೆ. ಕೊರೊನಾ ಸೋಂಕು ಇರಬಹುದು ಎನ್ನುವ ಭಯ ಪೋಷಕರಲ್ಲಿ ಉಂಟಾಗಿದೆ.

ಆದರೆ ದಾಖಲಾದ ಮಕ್ಕಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಡಿಹೆಚ್ಓ ಡಾ.ರಂಗನಾಥ್ ತಿಳಿಸಿದ್ದಾರೆ.ಹೀಗಿದ್ದರೂ ರೋಗ ಹತೋಟಿಗೆ ಬಾರದೇ ಇರುವುದರಿಂದ ಈ ವಿಚಿತ್ರ ಸೋಂಕಿನ ಹತೋಟಿಗೆ ಆರೋಗ್ಯ ಇಲಾಖೆ ಹರಸಾಹಸಪಡುತ್ತಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 215 ಮಕ್ಕಳು ಈ ರೋಗಲಕ್ಷಣಗಳಿಮದ ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ 12 ಮಕ್ಕಳು ಗಂಟಲು, ಮೂಗು ದ್ರಾವಣವನ್ನು ಎನ್ಐವಿ ಲ್ಯಾಬ್ ಗೆ ಕಳುಹಿಸಲಾಗಿದೆ. ಇದಕ್ಕೂ ಮೊದಲು ಕಳುಹಿಸಲಾಗಿದ್ದು 12 ಮಕ್ಕಳ ವರದಿ ಆರ್ ಎಸ್ ವಿ ವೈರಸ್ ಎಂದು ಪತ್ತೆಯಾಗಿದೆ. ಅದೊಂದು ಸಾಮಾನ್ಯ ರೋಗ ಲಕ್ಷಣವಾಗಿದೆ. ಆದ್ದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights